Friday, May 1, 2026

ಪಂಚ ರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆ ಮೋದಿ ಸರಕಾರದಿಂದ ಜನರಿಗೆ ಗ್ಯಾಸ್ ಸಿಲಿಂಡರ್ ಶಾಕ್ : ರಮೇಶ್ ಕಾಂಚನ್

ಪಂಚ ರಾಜ್ಯಗಳ ಚುನಾವಣೆ ಮುಗಿಯುವ ತನಕ ಕಾದು ಏಕಾಏಕಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹993ರ ಭಾರೀ ಏರಿಕೆ ಮಾಡುವ ಮೂಲಕ ಮೋದಿ ಸರಕಾರ ದೇಶದ ಜನತೆಗೆ ಶಾಕ್ ನೀಡಿದ್ದು ಇದಕ್ಕೆ ಬಿಜೆಪಿ ನಾಯಕರು ಸ್ಪಷ್ಟನೆ ನೀಡಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯುದ್ದವನ್ನು ನೆಪವಾಗಿರಿಸಿಕೊಂಡ ಕೇಂದ್ರದ ಬಿಜೆಪಿ ಸರಕಾರ ಗ್ಯಾಸ್ ಪೊರೈಕೆಯಲ್ಲಿ ಸಮಸ್ಯೆ ಮಾಡಿದ್ದಲ್ಲದೆ ಮಾರ್ಚ್ ತಿಂಗಳಲ್ಲಿ ರೂ 114 ಏರಿಸಿದರೆ ಏಪ್ರಿಲ್ ನಲ್ಲಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ರೂ 195ನ್ನೂ ಏರಿಸಿ ಈಗ ಪುನಃ ಮೇ ತಿಂಗಳಿಗೆ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಮತ್ತೆ 993 ರೂ ಗಳನ್ನು ಏರಿಸಿರುವುದರ ಮೂಲಕ ನರೇಂದ್ರ ಮೋದಿಯವರು ಬೆಲೆ ಏರಿಕೆಯಲ್ಲಿ ನೂತನ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 993 ರೂಪಾಯಿಗಳಷ್ಟು ಭಾರಿ ಏರಿಕೆ ಕಂಡಿದ್ದು, ಹೋಟೆಲ್ ಮಾಲೀಕರಿಗೆ ಮತ್ತು ಜನಸಾಮಾನ್ಯರಿಗೆ ಮತ್ತೊಂದು ಆಘಾತ ನೀಡಿದೆ. ಈ ಏರಿಕೆಯು ಹೋಟೆಲ್ ಉದ್ಯಮದ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಊಟ, ತಿಂಡಿ ಮತ್ತು ಪಾನೀಯಗಳ ಬೆಲೆಗಳು ಹೆಚ್ಚಾಗುವ ಅನಿವಾರ್ಯತೆ ಸೃಷ್ಟಿಯಾಗಿದೆ. ಇದರಿಂದ ಸಾಮಾನ್ಯ ಜನರು ಪರಿಸ್ಥಿತಿ ಇನ್ನಷ್ಟು ಕೆಟ್ಟ ಹಂತಕ್ಕೆ ತಲುಪಲಿದ್ದು ಬಿಜೆಪಿಗರ ನಾಟಕಕ್ಕೆ ಜನರು ಬೀದಿಗೆ ಬಂದು ಪ್ರತಿಭಟಿಸುವ ದಿನ ದೂರವಿಲ್ಲ.

ಹಿಂದೆಲ್ಲಾ ಕಾಂಗ್ರೆಸ್ ಸರಕಾರ ಬೆಲೆ ಏರಿಕೆ ಮಾಡಿದಾಗ ಶೋಭಾ ಕರಂದ್ಲಾಜೆ, ಇರಾನಿ ಸಹಿತ ಬಿಜೆಪಿ ಮಹಿಳಾ ಮಣಿಗಳು ರಸ್ತೆ ಮಧ್ಯ ಮಲಗಿ ಉರುಳು ಸೇವೆ ಮಾಡುತ್ತಿದ್ವರು ಈಗ ಮೌನವಾಗಿದ್ದಾರೆ. ವಾಣಿಜ್ಯ ಸಿಲಿಂಡರ್ ಬೆಲೆ ಏರಿಸಿದಂತೆ ಗುಟ್ಟಲ್ಲಿ ಮನೆ ಬಳಕೆ ಸಿಲಿಂಡರ್ ಬೆಲೆಯನ್ನು ಕೂಡ ಸದ್ಯದಲ್ಲಿಯೇ ಏರಿಸಲಿದ್ದು ಜನರಿಗೆ ಇವರ ನಾಟಕಗಳು ಅರ್ಥವಾಗಿದ್ದು ಸೂಕ್ತ ಸಮಯದಲ್ಲಿ ಸೂಕ್ತ ಉತ್ತರ ನೀಡಲಿದ್ದಾರೆ. ಬಿಜೆಪಿಗರಿಗೆ ಮಾನ ಮರ್ಯದೆ ಎನ್ನುವುದು ಸ್ವಲ್ಪವಾದರೂ ಇದ್ದಲ್ಲಿ ಏರಿಸಿರುವ ಸಿಲಿಂಡರ್ ಬೆಲೆಯನ್ನು ಕೂಡಲೇ ಇಳಿಸಲಿ ಎಂದು ರಮೇಶ್ ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

More like this
Related

ವಿಕೆಟ್ ಪಡೆಯುವುದರಲ್ಲೇ ಗೆಲುವಿನ ಅವಕಾಶ ಇತ್ತು: ಭುವನೇಶ್ವರ್ ಕುಮಾರ್

ಅಹಮದಾಬಾದ್, : ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ರನ್‌ಗಳನ್ನು ಕಾಪಾಡುವುದಕ್ಕಿಂತ ವಿಕೆಟ್‌ಗಳನ್ನು...

ವಿಕೆಟ್‌ಗಳನ್ನು ಸರಣಿಯಾಗಿ ಕಳೆದುಕೊಂಡದ್ದು ಸೋಲಿಗೆ ಕಾರಣ: ಆರ್‌ಸಿಬಿ ಬಗ್ಗೆ ದಿನೇಶ್ ಕಾರ್ತಿಕ್ ವಿಶ್ಲೇಷಣೆ

ಅಹಮದಾಬಾದ್, : ಗುಜರಾತ್ ಟೈಟನ್ಸ್ ವಿರುದ್ಧದ ಸೋಲಿನ ಬಳಿಕ ರಾಯಲ್ ಚಾಲೆಂಜರ್ಸ್...

ಹೋರ್ಮುಜ್ ಜಲಸಂಧಿ ಬಂದ್ ಪರಿಣಾಮ: ಪಾಕಿಸ್ತಾನದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ

ಇಸ್ಲಾಮಾಬಾದ್, : ಇರಾನ್-ಅಮೆರಿಕಾ ಸಂಘರ್ಷದ ನಡುವೆ ಹೋರ್ಮುಜ್ ಜಲಸಂಧಿ ಬಂದ್ ಆಗಿರುವ...

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಗೆ ಕೇಂದ್ರವೇ ಹೊಣೆ: ಡಿಕೆ ಶಿವಕುಮಾರ್

ಬೆಂಗಳೂರು,: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ...

Copying is disabled on Udupi Digital News.