ಕುಂದಾಪುರ: ಪ್ರಗತಿಪರ ಕೃಷಿಕ, ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷ ಕಿಶನ್ ಕುಮಾರ್ ಶೆಟ್ಟಿ ಕೆಂಚನೂರು ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಸಿ ಕೃಷಿಯ ಬಗ್ಗೆ ಅಪಾರ ಅನುಭವವನ್ನು ಹೊಂದಿದ್ದ ಅವರು, ಕುಂದಾಪುರದಲ್ಲಿ ಕೃಷಿಕರಿಗಾಗಿ ಮಾಹಿತಿ ಕೇಂದ್ರವನ್ನು ಆರಂಭಿಸಿದ್ದರು. ಕೃಷಿ ಪಂಡಿತ ಪ್ರಶಸ್ತಿ ಸೇರಿದಂತೆ ಹಲವು ಸನ್ಮಾನಗಳನ್ನು ಪಡೆದುಕೊಂಡಿದ್ದರು. ವಂಡ್ಸೆ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸುತ್ತಿದ್ದರು.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.




