Friday, September 18, 2026

ಬ್ರಹ್ಮಾವರ | ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಜೀವಬೆದರಿಕೆ ಆರೋಪ; ಇಬ್ಬರ ಬಂಧನ

ಉಡುಪಿ: ಬ್ರಹ್ಮಾವರ ಮೂಲದ ಅಪ್ರಾಪ್ತ ಬಾಲಕನನ್ನು ಅಪಹರಿಸಿ ಕೇರಳಕ್ಕೆ ಕರೆದೊಯ್ದು ಬಲವಂತವಾಗಿ ಕೆಲಸಕ್ಕೆ ಸೇರಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಬಾಲಾಪರಾಧಿಯನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ.

ಪ್ರಕರಣದಲ್ಲಿ ಆರೋಪಿಗಳಾದ ವಿಖ್ಯಾತ್ ಆಚಾರ್ಯ (19), ಸಾಲಿಕೇರಿ, ವಾರಂಬಳ್ಳಿ ನಿವಾಸಿ ಹಾಗೂ ಸುಚಿತ್ ನಾಯಕ್ (20), ಮಟಪಾಡಿ ನಿವಾಸಿಯನ್ನು ಪೊಲೀಸರು ಬಂಧಿಸಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಮೂರನೇ ಆರೋಪಿ ಬಾಲಾಪರಾಧಿಯಾಗಿದ್ದು, ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಬ್ರಹ್ಮಾವರ ನಿವಾಸಿಯ ಅಪ್ರಾಪ್ತ ಪುತ್ರನನ್ನು ಜೂನ್ 1ರಂದು ಬೆಳಿಗ್ಗೆ ಸುಮಾರು 8.30ಕ್ಕೆ ಬ್ರಹ್ಮಾವರ ಬಸ್ ನಿಲ್ದಾಣದಿಂದ ಆರೋಪಿಗಳು ಅಪಹರಿಸಿ, ಕೇರಳ ರಾಜ್ಯದ ತಲಪಾಡಿ ಸಮೀಪದ ಕುಂಜತ್ತೂರು ಪದವು ಪ್ರದೇಶದಲ್ಲಿರುವ ವುಡ್ ಕಂಪನಿಗೆ ಬಲವಂತವಾಗಿ ಕೆಲಸಕ್ಕೆ ಸೇರಿಸಿದ್ದರು.

ಬಳಿಕ ಬಾಲಕ ಮನೆಗೆ ತೆರಳುವುದಾಗಿ ತಿಳಿಸಿದರೂ, ಜೂನ್ 9ರಂದು ಮಧ್ಯಾಹ್ನ ಸುಮಾರು 1.30ಕ್ಕೆ ಆರೋಪಿಗಳ ಪೈಕಿ ಸುಚಿತ್ ನಾಯಕ್ ವೈರ್ನಿಂದ ಹಲ್ಲೆ ನಡೆಸಿದ್ದು, ವಿಖ್ಯಾತ್ ಆಚಾರ್ಯ ಕೈಯಲ್ಲಿದ್ದ ಚೂರಿಯನ್ನು ತೋರಿಸಿ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಅಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ಕೃತ್ಯವನ್ನು ಮತ್ತೋರ್ವ ಆರೋಪಿ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 117/2026ರಡಿ ಬಿಎನ್ಎಸ್ನ ಕಲಂ 137(2), 115(2), 352, 351(3) ಸಹಿತ 3(5), ಬಾಲ ನ್ಯಾಯ (JJ) ಕಾಯ್ದೆಯ ಕಲಂ 75 ಹಾಗೂ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಕಲಂ 3(1)(r), 3(1)(s), 3(2)(v-a) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

More like this
Related

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ತುಳು ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯಾಗಿ ಘೋಷಣೆ

ಮಂಗಳೂರು: ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ...

ಲಾಹೋರ್ ಸಭೆಗಳು: ಭಾರತಕ್ಕೆ ಬಹುಮುಖ ಮಾದಕವಸ್ತು ಕಳ್ಳಸಾಗಣೆ ಹೆಚ್ಚಿಸಲು ಐಎಸ್‌ಐ ಯೋಜನೆ?

ನವದೆಹಲಿ: ಮಾದಕವಸ್ತುಗಳ ವಿರುದ್ಧದ ಹೋರಾಟವು 2026-29ರ ಅವಧಿಯಲ್ಲಿ ತೀವ್ರ ‘ಮಿಷನ್ ಮೋಡ್’ಗೆ...

ಮಣಿಪಾಲದಲ್ಲಿ 30 ಗ್ರಾಂ MDMA ಸಹಿತ ಇಬ್ಬರ ಬಂಧನ

ಉಡುಪಿ: ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ...

ಗಣೇಶನನ್ನು ಪೂಜಿಸುವುದು ಪ್ರಕೃತಿಯ ಆರಾಧನೆ: ಧರ್ಮದರ್ಶಿ ಸಗ್ರಿ ಗೋಪಾಲಕೃಷ್ಣ ಸಾಮಗ ಅಭಿಪ್ರಾಯ

ಉಡುಪಿ: ನಾವಿರುವ ಪ್ರಕೃತಿಯೇ ದೇವರಾಗಿದೆ. ದೇವಿ ಪಾರ್ವತಿಯ ಮೂಲಕ ಪ್ರಕೃತಿಯಲ್ಲಿ ಜನಿಸಿದ...

Copying is disabled on Udupi Digital News.