Sunday, September 13, 2026

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಮೂಲಕ ವಂಚನೆ : ಪ್ರಕರಣ ದಾಖಲು

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧಿಕೃತ ವೆಬ್ಸೈಟ್ ಬದಲಿಗೆ, ಅಪರಿಚಿತರು ನಕಲಿ ವೆಬ್ಸೈಟ್ ಸೃಷ್ಟಿಸಿ ದೇವಳದ ಜಗದಾಂಬಿಕಾ ಅತಿಥಿ ಗೃಹದ ಕೊಠಡಿಗಳ ಬುಕ್ಕಿಂಗ್ ಹೆಸರಿನಲ್ಲಿ ಭಕ್ತರಿಂದ ಹಣ ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ (56) ನೀಡಿದ ದೂರಿನಂತೆ, ದೇವಸ್ಥಾನದ ಅಧಿಕೃತ ವೆಬ್ಸೈಟ್ಗೆ ಬದಲಾಗಿ jagadambikaguesthouse.xyz ಎಂಬ ನಕಲಿ ವೆಬ್ಸೈಟ್ ಅನ್ನು ‘hotel accommodation’ ಹೆಸರಿನಲ್ಲಿ ಅಕ್ರಮ ಲಾಭದ ಉದ್ದೇಶದಿಂದ ಸೃಷ್ಟಿಸಲಾಗಿದೆ.

ಈ ನಕಲಿ ವೆಬ್ಸೈಟ್ ಮೂಲಕ ಜಗದಾಂಬಿಕಾ ಅತಿಥಿ ಗೃಹದ ಕೊಠಡಿಗಳನ್ನು ಕಾಯ್ದಿರಿಸುವುದಾಗಿ ಭಕ್ತರನ್ನು ನಂಬಿಸಿ, ವಾಟ್ಸ್ಆಪ್ ಮೂಲಕ ಫೋನ್ಪೇ ಕ್ಯೂಆರ್ ಕೋಡ್ ಕಳುಹಿಸಿ ಹಣ ಪಡೆಯಲಾಗುತ್ತಿತ್ತು. ಬಳಿಕ ನಕಲಿ ರಶೀದಿಗಳನ್ನು ನೀಡಿ, ದೇವಸ್ಥಾನದ ಕೊಠಡಿಗಳ ಬುಕ್ಕಿಂಗ್ ಹೆಸರಿನಲ್ಲಿ ಭಕ್ತರಿಗೆ ವಂಚಿಸಲಾಗುತ್ತಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.