ಕುಂದಾಪುರ: ಮರಳು ತುಂಬಿದ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹಂಗಳೂರು ಯುನಿಟಿ ಹಾಲ್ ಬಳಿ ಸಂಭವಿಸಿದೆ.

ಸ್ಕೂಟರ್ ಸವಾರ ಬಾಣಸಿಗ ಕೃಷ್ಣಮೂರ್ತಿ ಅಡಿಗ ಬೀಜಾಡಿ ಮೃತ ದುರ್ದೈವಿ.
ಮರಳು ತುಂಬಿದ ಟಿಪ್ಪರ್ ವಾಹನ ಕೋಟೇಶ್ವರ ಕಡೆ ಹೋಗುತ್ತಿದ್ದು ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟ ಪರಿಣಾಮ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.

ಸೋಮವಾರ ಶೆಟ್ರಕಟ್ಟೆಯಲ್ಲಿ ಕೆಎಸ್ಆರ್ಟಿಸಿ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 14 ಮಂದಿ ಬಸ್ ಪ್ರಯಾಣಿಕರು ಗಾಯಗೊಂಡಿರುವ ಸುದ್ದಿ ನೆನಪು ಮಾಸುವ ಮುನ್ನವೇ ಇನ್ನೊಂದು ಟಿಪ್ಪರ್ ದುರಂತ ಸಂಭವಿಸಿದ್ದು, ಸಾರ್ವಜನಿಕರು ಭಯಭೀತರಾಗಿದ್ದಾರೆ.




