Friday, June 26, 2026

ಹಿರೇಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನ ಜಿರ್ಣೋದ್ದಾರ ಶಿಲಾನ್ಯಾಸ

ಹಿರಿಯಡ್ಕ: ಇಲ್ಲಿನ ಹಿರೇಬೆಟ್ಟು ಭಟ್ರಕೋಡಿಯಲ್ಲಿನ ಗ್ರಾಮದ ದೇವರಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಿರ್ಣೋದ್ದಾರದ ಕಾರ್ಯದ ಅಂಗವಾಗಿ ಶಿಲಾಮಯ ಗರ್ಭಗೃಹದ ನಿರ್ಮಾಣಕ್ಕೆ ಬಳಸುವ ನೂತನ ಶಿಲೆಗಳಿಗೆ ಪ್ರಥಮ ಪೂಜೆ ಸಲ್ಲಿಸುವ ಮೂಲಕ ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗು ಸಿಜೆಎಮ್ ಎಮ್.ಪುರುಷೋತ್ತಮ್ ಬುಧವಾರ ಚಾಲನೆ ನೀಡಿದರು.

ಶ್ರೀ ಕ್ಷೇತ್ರದ ತಂತ್ರಿಗಳಾದ ವಿದ್ವಾನ್ ಡಾ| ಸತ್ಯ ಕೃಷ್ಣ ಭಟ್ ಮಂಗಳೂರು ಇವರ ನೇತೃತ್ವದಲ್ಲಿ ಬೆಳಗ್ಗೆ 10 ಗಂಟೆಗೆ ಶಿಲಾನ್ಯಾಸದ ಶಿಲೆಗಳಿಗೆ ಅರಶಿನ, ಕುಂಕುಮ, ಹಾಲು, ಹೂಗಳನ್ನು ಸಮರ್ಪಿಸಿ, ಸ್ವತಃ ನ್ಯಾಯಾಧೀಶರೇ ಆರತಿಯನ್ನು ಬೆಳಗುವುದರ ಮೂಲಕ ಶುಭ ಕಾರ್ಯವನ್ನು ಆರಂಭಿಸಿದರು.

ಜಿರ್ಣೋದ್ದಾರ ಸಮಿತಿಯ ಅಧ್ಯಕ್ಷ ಶ್ರೀನಿಧಿ ಹೆಗ್ಡೆ, ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ನಾಯಕ್, ಸೀತಾರಾಮ್ ಭಟ್, ಜಯಪ್ರಕಾಶ್ ನಾಯಕ್, ಶಂಕರ ನಾಯಕ್, ಚಂದ್ರಶೇಖರ ನಾಯಕ್, ಸುಂದರ ಮೂಲ್ಯ, ನಾರಾಯಣ ಪೂಜಾರಿ, ಚಂದ್ರಯ್ಯ ಆಚಾರ್ಯ, ಪುರಂದರ ಆಚಾರ್ಯ, ರಮೇಶ್ ನಾಯಕ್, ಗುರುನಂದನ್ ನಾಯಕ್, ಗುರುದಾಸ್ ಭಂಡಾರಿ, ಸುಧೀರ್ ಶೆಟ್ಟಿ, ಶ್ಯಾಮ್ ನಾಯ್ಕ್, ಸುರೇಶ್ ನಾಯ್ಕ್, ಶೈಲೇಶ್ ಪೂಜಾರಿ, ಗುರುರಾಜ್ ಆಚಾರ್ಯ, ಶಶೀಂದ್ರ ಪೂಜಾರಿ, ದಿನೇಶ್ ಪ್ರಭು, ಡಾ.ಕೃಷ್ಣ ಮೂರ್ತಿ, ಕೇಶವ್ ಭಂಡಾರಿ, ಗೋಪಾಲ್ ನಾಯಕ್, ಕೇಶವ್ ನಾಯಕ್, ನಂದಕುಮಾರ್, ಮಹದೇವ್ ಭಟ್, ವಸಂತ್ ನಾಯಕ್, ಸುರೇಶ್ ಭಟ್, ಮುರುಳೀಧರ್ ಲಾಗ್ವಂಕರ್ ಮೊದಲಾದವರು ಉಪಸ್ಥಿತರಿದ್ದರು.

More like this
Related

ಗ್ರಾಹಕ ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಆರೋಪ:  ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಬಂಧನ

ಉಡುಪಿ: ಗ್ರಾಹಕ ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲಿಸದೇ ಇದ್ದ ಆರೋಪದ ಹಿನ್ನೆಲೆಯಲ್ಲಿ...

ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್

ಉಡುಪಿ: ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹ ಫಲನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು...

ಉತ್ತಮ ವಿದ್ಯಾಭ್ಯಾಸದಿಂದಲೇ ದೇಶ ಸರ್ವೋತ್ಕೃಷ್ಟವಾಗಲು ಸಾಧ್ಯ: ಜಗದ್ಗುರು ಶ್ರೀ ವಿಧುಶೇಖರ ಭಾರತೀ ಶ್ರೀಗಳು

ಕುಂದಾಪುರ: ಭಾರತದಂತಹ ಮಹಾನ್ ದೇಶವು ಆಧ್ಯಾತ್ಮಿಕ ಕ್ಷೇತ್ರದಲ್ಲಿ ಈಗಾಗಲೇ ವಿಶ್ವದಲ್ಲಿ ವಿಶಿಷ್ಟ...

ಡಾ‌. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ಕುಂದಾಪುರ: ಮುಂಬೈನಲ್ಲಿ ನಡೆದ 19ನೇ ಮುಂಬೈ ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡದ...

Copying is disabled on Udupi Digital News.