Monday, September 14, 2026

ಯುವತಿಯ ವಿವಾಹವಾಗಿ ಮನೆ ಅಳಿಯನಾದರೆ ನಾನೇ ಅವರಿಗೆ 50 ಲಕ್ಷ ರೂ. ಕೊಡುವೆ: ಪ್ರತಿಭಾ ಕುಳಾಯಿ ಸವಾಲು

ಪುತ್ತೂರು ಲವ್-ದೋಖಾ ಪ್ರಕರಣ: ಜ. 24ರಂದು ಕಲ್ಲಡ್ಕದಲ್ಲಿ ಪ್ರತಿಭಟನಾರ್ಥವಾಗಿ ಮಗುವಿಗೆ ನಾಮಕರಣ ಶಾಸ್ತ್ರ

ಮಂಗಳೂರು: ಪುತ್ತೂರು ಲವ್-ದೋಖಾ ಪ್ರಕರಣದಲ್ಲಿ ಡಿಎನ್ಎ ಪರೀಕ್ಷೆಯಲ್ಲಿ ಸಂತ್ರಸ್ತೆಯ ಮಗುವಿನ ತಂದೆ ಕೃಷ್ಣ ಜೆ.ರಾವ್ ಎಂಬುದು ಸಾಬೀತಾದರೂ ಆತ ಮದುವೆಯಾಗಲು ಒಪ್ಪುತ್ತಿಲ್ಲ. ಬದಲಾಗಿ 50 ಲಕ್ಷ ರೂ.ಗಳ ಪರಿಹಾರ ನೀಡಿ ಸಂಧಾನ ಮಾತುಕತೆಗೆ ಮುಂದಾಗಿದ್ದಾರೆ. ಇದಕ್ಕೆ ಯುವತಿಯಾಗಲಿ, ಆಕೆಯ ಕುಟುಂಬವಾಗಲಿ ಒಪ್ಪುವುದಿಲ್ಲ. ನಮಗೆ ಹಣ ಬೇಡ, ಸಾಮಾಜಿಕ ನ್ಯಾಯ ಬೇಕು. ಆರೋಪಿ ಕೃಷ್ಣ ಜೆ ರಾವ್ ಪೂಜಾಳನ್ನು ವಿವಾಹವಾಗಿ ಮನೆ ಅಳಿಯನಾದರೆ ನಾನೇ ಅವರಿಗೆ 50 ಲಕ್ಷ ರೂ. ಕೊಡುತ್ತೇನೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಸವಾಲು ಹಾಕಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ಅನ್ಯಾಯಕ್ಕೊಳಗಾದ ಯುವತಿ, ಮಗು ಹಾಗೂ ಯುವತಿಯ ಪೋಷಕರ ಜೊತೆ ನಡೆಸಿದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಯುವತಿಗೆ ಮಗು ನೀಡಿ ಮದುವೆಗೆ ನಿರಾಕರಿಸುತ್ತಿರುವ ಆರೋಪಿ ಕೃಷ್ಣ ಜೆ.ರಾವ್ ಗೆ ಕೋರ್ಟ್ ನಿಂದ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಲಾಗುವುದು. ಸಂಧಾನದ ಬಾಗಿಲು ಮುಚ್ಚಿದ್ದು, ಜ. 24ರಂದು ಕಲ್ಲಡ್ಕದಲ್ಲಿ ಪ್ರತಿಭಟನಾರ್ಥವಾಗಿ ಮಗುವಿಗೆ ನಾಮಕರಣ ಶಾಸ್ತ್ರ ನಡೆಸುತ್ತೇವೆ. ಕೃಷ್ಣ ಜೆ. ರಾವ್ ಯುವತಿ ಜೊತೆ ವಿವಾಹ ಆಗಿ ಆ ಮಗುವಿಗೆ ತಂದೆಯ ಸ್ಥಾನಮಾನ ನೀಡುವ ಆಶಾಭಾವನೆಯೊಂದಿಗೆ ಆತನಿಗೆ ಜಾಮೀನು ದೊರಕಿ ಆತ ಆರಾಮವಾಗಿ ಓಡಾಡಿಕೊಂಡಿದ್ದರೂ, ನಾವು ಈವರೆಗೆ ಸುಮ್ಮನಿದ್ದೆವು. ಆತನ ತಾಯಿ ನನ್ನ ಮೇಲೆ ಹಾಗೂ ಯುವತಿಯ ತಾಯಿ ಮೇಲೆ ಮಾನ ಹರಾಜು ಪ್ರಕರಣ ದಾಖಲಿಸಿದ್ದಾರೆ. ಆದರೆ ವಾಸ್ತವದಲ್ಲಿ ಇಲ್ಲಿ ಓರ್ವ ಯುವತಿ ಮತ್ತು ಆಕೆಯ ಕಟುಂಬದವರ ಮಾನ ಹರಾಜು ಹಾಕಲಾಗಿದೆ ಎಂದವರು ಹೇಳಿದರು.

ಕಲ್ಲಡ್ಕದಲ್ಲಿ ನಾಮಕರಣ:
ಕರಾವಳಿಯಲ್ಲಿ ಹಿಂದೂ ಸಮಾಜದ ಬಗ್ಗೆ ಮುಖಂಡರು, ರಾಜಕೀಯ ನೇತಾರರು ಒಗ್ಗಟ್ಟಿನ ಬಗ್ಗೆ ಮಾತನಾಡುತ್ತಾರೆಯೇ ವಿನಃ ಇಂತಹ ಸನ್ನಿವೇಶದಲ್ಲಿ ಸಿಲುಕಿದವರನ್ನು ಪಾರು ಮಾಡುವ ಬಗ್ಗೆ ನೆರವಿಗೆ ಧಾವಿಸುತ್ತಿಲ್ಲ. ಹಾಗಾಗಿ ನಾವು ಬೇರೆ ಸಮುದಾಯದವರನ್ನೂ ಧ್ವನಿ ಎತ್ತಲು ಆಹ್ವಾನಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ರಾಜಕೀಯ ಹಾಗೂ ಸಂಘಟನಾತ್ಮಕವಾಗಿ ಶಕ್ತಿ ಕೇಂದ್ರ ಆಗಿರುವ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಊರಿನಿಂದಲೇ ಹೋರಾಟ ಆರಂಭಿಸುತ್ತಿದ್ದೇನೆ. ಇದೇ ಕಾರಣಕ್ಕೆ ಜ.24 ರಂದು ಕಲ್ಲಡ್ಕದಲ್ಲೇ ಮಗುವಿಗೆ ನಾಮಕರಣ ಶಾಸ್ತ್ರ ನೆರವೇರಿಸುವುದಾಗಿ ಪ್ರತಿಭಾ ಕುಳಾಯಿ ತಿಳಿಸಿದರು.

ಸಂತ್ರಸ್ತೆ ಅಬಲೆಯಲ್ಲ:
ಮಗುವಿನ ತಂದೆ ಕೃಷ್ಣ ಜೆ.ರಾವ್ ಯಾವ ಕಾರಣಕ್ಕೆ ಪೂಜಾಳನ್ನು ತಿರಸ್ಕರಿಸುತ್ತಿದ್ದಾನೆ ಎಂದು ಅರ್ಥವಾಗುತ್ತಿಲ್ಲ. ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸಿ ಅರ್ಥಮಾಡಿಕೊಂಡಿದ್ದ ಇವರಿಬ್ಬರ ಸರಸದಲ್ಲಿ ಮಗು ಜನಿಸಿದ ಬಳಿಕ ಮತ್ತೆ ಆಕೆಯನ್ನು ದೂರ ಮಾಡುವುದರಲ್ಲಿ ಅರ್ಥ ಇಲ್ಲ. ಆಕೆ ಯಾವುದೇ ಕಾರಣಕ್ಕೂ ಅಬಲೆ ಅಲ್ಲ, ಆಕೆಯೂ ನಿತ್ಯವೂ ನೊಂದುಕೊಳ್ಳುತ್ತಿದ್ದು, ಆತ್ಮಹತ್ಯೆಗೂ ಯೋಚಿಸಿದ್ದಾಳೆ. ಅವಳ ಬದುಕಿಗೆ ನಾವೆಲ್ಲ ಬೆಂಬಲವಾಗಿ ನಿಲ್ಲುತ್ತಿದ್ದು, ಮುಂದೆ ಕೋರ್ಟ್ ತೀರ್ಮಾನಕ್ಕೆ ಬದ್ಧವಾಗಿ ಮುಂದುವರಿಯುತ್ತೇವೆ ಎಂದು ಪ್ರತಿಭಾ ಕುಳಾಯಿ ಹೇಳಿದರು.

ಪುತ್ತಿಲ ಪೂಜಾ ಕಲ್ಯಾಣ ಮಾಡಿಸಲಿ :
ಪುತ್ತೂರಿನ ಅರುಣ್ ಕುಮಾರ್ ಪುತ್ತಿಲರ ಬಗ್ಗೆ ನನಗೆ ತುಂಬಾ ಗೌರವ ಇದೆ. ಅವರು ಶ್ರೀನಿವಾಸ ದೇವರಿಗೆ ಕಲ್ಯಾಣ ಅದ್ದೂರಿಯಾಗಿ ನೆರವೇರಿಸಿದ್ದಾರೆ. ಶ್ರೀನಿವಾಸ ದೇವರಿಗೆ ಯಾವಾಗಲೋ ಕಲ್ಯಾಣ ಆಗಿದೆ. ಈಗ ಆಗಬೇಕಾಗಿರುವುದು ಪೂಜಾಳಿಗೆ. ಅವಳಿಗೆ ಕೃಷ್ಣ ಜೆ.ರಾವ್ ಜೊತೆ ಕಲ್ಯಾಣ ಮಾಡಿಸುವ ಬಗ್ಗೆ ಪುತ್ತಿಲ ಮನಸ್ಸು ಮಾಡಲಿ. ಮದುವೆ ವಿಚಾರದಲ್ಲಿ ಸಂಧಾನ ಮಾತುಕತೆ ವೇಳೆ ಆತನ ಪೋಷಕರು ಈಡೇರಿಸಲಾಗದ ಷರತ್ತು ಇಟ್ಟಿದ್ದಾರೆ. ಮಗುವನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಬೇಕು. ಹಾಗಾದರೆ ಮಾತ್ರ ಪೂಜಾಳವನ್ನು ಆತ ವಿವಾಹವಾಗಿ ವಿಚ್ಛೇದನ ನೀಡಲಾಗುವುದು. ಅಲ್ಲದೆ ಈ ವೇಳೆ 50 ಲಕ್ಷ ರೂ. ಪರಿಹಾರ ನೀಡಲಾಗುವುದು. ಇದಕ್ಕಾಗಿ ಮೊದಲು ಆತನ ವಿರುದ್ಧದ ಎಲ್ಲಾ ಪ್ರಕರಣವನ್ನು ವಾಪಸ್ ಪಡೆಯಬೇಕು ಎಂದೆಲ್ಲಾ ಷರತ್ತುಗಳನ್ನು ವಿಧಿಸಲಾಗಿದೆ ಎಂದರು.

ನಾನು ತಪ್ಪು ಮಾಡಿದ್ದೇನೆ. ಹೇಗೂ ತಪ್ಪಾಗಿ ಹೋಗಿದೆ. ಈಗ ಮಗುವಿನ ತಂದೆ ಯಾರು ಎಂದು ಯಾರಾದರೂ ಕೇಳಿದರೆ ನಾನು ಏನೆಂದು ಹೇಳಲಿ, ಅದನ್ನು ನೆನೆಸುವಾಗ ಸಾಯುವ ಎಂದಾಗುತ್ತಿದೆ ಎಂದು ಸಂತ್ರಸ್ತೆ ಪೂಜಾ ಹೇಳಿದರು.

ನನ್ನ ಮಗಳಿಂದ ತಪ್ಪಾಗಿದೆ, ಆತನೂ ತಪ್ಪುಮಾಡಿದ್ದಾನೆ. ಇದು ಅವರದೇ ಮಗು ಎಂಬುದು ಡಿಎನ್ಎ ಪರೀಕ್ಷೆಯಲ್ಲೂ ಸಾಬೀತಾಗಿದೆ. ನಮಗೆ ನ್ಯಾಯ ಬೇಕು. ಆತ ಪೂಜಾಳನ್ನು ಮದುವೆ ಆಗಿ ಒಳ್ಳೆಯದರಲ್ಲಿ ಸಂಸಾರ ನಡೆಸಬೇಕು ಎಂದು ಸಂತ್ರಸ್ತೆ ತಾಯಿ ನಮಿತಾ ಹೇಳಿದರು.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.