Monday, May 4, 2026

ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ: ಹೈಕೋರ್ಟ್ ಆದೇಶ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡುವಂತೆ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು 2026ರ ಮಾರ್ಚ್ 13ರಂದು ಹೊರಡಿಸಿದ್ದ ಗಡಿಪಾರು ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರ ಏಕಸದಸ್ಯ ಪೀಠ ಗುರುವಾರ ತೀರ್ಪು ಪ್ರಕಟಿಸಿತು.

ಅರ್ಜಿಯು ಊರ್ಜಿತವಾಗುವುದಿಲ್ಲ ಎಂದು ತಿಳಿಸಿದ ನ್ಯಾಯಾಲಯ, ಗಡಿಪಾರು ಆದೇಶದ ವಿರುದ್ಧ ಗೃಹ ಕಾರ್ಯದರ್ಶಿಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದೆ ಎಂದು ತಿಳಿಸಿದೆ.

ಇದೇ ವೇಳೆ, ಮುಂದಿನ ಎರಡು ವಾರಗಳ ಕಾಲ ಗಡಿಪಾರು ಸಂಬಂಧ ಯಾವುದೇ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಈ ಪ್ರಕರಣದ ವಿಸ್ತೃತ ತೀರ್ಪು ಇನ್ನಷ್ಟೇ ಲಭ್ಯವಾಗಬೇಕಿದೆ.

More like this
Related

ಬಾಗಲಕೋಟೆ ಉಪಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ

ಬಾಗಲಕೋಟೆ : ಆಡಳಿತಾರೂಢ ಕಾಂಗ್ರೆಸ್ಗೆ ಪ್ರತಿಷ್ಠೆಯ ಕಣವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ...

ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚಿಸುತ್ತೇವೆ: ವಿಜಯ್ ನೇತೃತ್ವದ ಟಿವಿಕೆ ವಿಶ್ವಾಸ

ಚೆನ್ನೈ: ತಮಿಳುನಾಡಿನಲ್ಲಿ ಸೂಪರ್ ಸ್ಟಾರ್‌ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ...

ಪಂಚ ರಾಜ್ಯ ಚುನಾವಣಾ ಫಲಿತಾಂಶ | ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ರ‍್ಯಾಲಿ ನಿಷೇಧಿಸಿದ ಚುನಾವಣಾ ಆಯೋಗ

ಕೋಲ್ಕತ್ತಾ: ಪಂಚ ರಾಜ್ಯ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ....

ಕರ್ನಾಟಕ ಉಪ ಚುನಾವಣೆ: ಬಾಗಲಕೋಟೆಯಲ್ಲಿ ಕಾಂಗ್ರೆಸ್, ದಾವಣಗೆರೆಯಲ್ಲಿ ಬಿಜೆಪಿ ಮುನ್ನಡೆ

Kerala Election Results 2026: ಬಹುಮತದ ಗಡಿ ದಾಟಿದ ಯುಡಿಎಫ್ ಮೈತ್ರಿಕೂಟಕೇರಳ...

Copying is disabled on Udupi Digital News.