Saturday, May 30, 2026

ಮಣಿಪಾಲ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ

ಉಡುಪಿ: ಕನಿಷ್ಠ ಕೂಲಿಯನ್ನು ರಾಜ್ಯ ಸರ್ಕಾರ ಪುನರ್‌ ಪರಿಶೀಲನೆ ಮಾಡಬೇಕು ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಮಣಿಪಾಲದಲ್ಲಿ ಸಾವಿರಾರು ಕಾರ್ಮಿಕರು ಭಾರಿ ಪ್ರತಿಭಟನೆ ನಡೆಸಿದರು.

ಮಣಿಪಾಲದ ಟೈಗರ್ ಸರ್ಕಲ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಎಸಿ ಮೂಲಕ ರಾಜ್ಯದ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು. ಇದೇ ವೇಳೆ ಸಾವಿರಾರು ಕಾರ್ಮಿಕರಿಂದ ಸಂಗ್ರಹಿಸಲಾದ ಸಹಿಗಳ ಪ್ರತಿಯನ್ನೂ ಹಸ್ತಾಂತರಿಸಲಾಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸರ್ಕಾರ ಸ್ಪಂದಿಸಬೇಕೆಂದು ಆಗ್ರಹಿಸಿದರು.

ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ,ಉಡುಪಿ ಜಿಲ್ಲಾ ಅಧ್ಯಕ್ಷ ರಾದ ಶಶಿಧರ್ ಗೊಲ್ಲ, ಕಾರ್ಯದರ್ಶಿ ಚಂದ್ರಶೇಖರ್. ವಿ ಕೋಶಾಧಿಕಾರಿ ಕವಿರಾಜ್. ಎಸ್.ಕಾಂಚನ್, ಹಂಚು ಕಾರ್ಮಿಕ ಸಂಘದ ಜಿಲ್ಲಾ ಕಾರ್ಯದರ್ಶಿ ಎಚ್.ನರಸಿಂಹ, ಜಿ.ಡಿ.ಪಂಜು, ಅಣ್ಣಪ್ಪ, ಕಟ್ಟಡ ಸಂಘದ ಉಡುಪಿ ಜಿಲ್ಲಾ ಮುಖಂಡರಾದ ರಾಜು ಪಡುಕೊಣೆ, ಸುಭಾಸ್ ಚಂದ್ರ ನಾಯಕ್, ಗಣೇಶ್ ತೊಂಡೆಮಕ್ಕಿ, ಸಂತೋಷ ಹೆಮ್ಮಾಡಿ, ಚಿಕ್ಕಯ್ಯ ಮೊಗವೀರ, ನಾಗರತ್ನ ಪಡುವರಿ ಅಂಗನವಾಡಿ ಮುಖಂಡರಾದ ಭಾರತಿ, ಯಶೋಧ ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಮುಖಂಡರಾದ ಮಹಾಬಲ ಹೊಡೆಯರ ಹೋಬಳಿ, ಉಮೇಶ್ ಕುಂದರ್, ಸುನೀತಾ. ಶೆಟ್ಟಿ, ಸುಮತಿ, ಬಲ್ಕೀಸ್, ನಳಿನಿ ಸಿಐಟಿಯು ಮುಖಂಡರಾದ ಸರೋಜ, ಮುರಳಿ ನಾಗೇಶ್ ರಾಮ ಕಾರ್ಕಡ, ಸೈಯಾದ್, ಮೋಹನ್ ಚಂದ್ರ ನಿಟ್ಟೆ, ಶೀಲಾವತಿ, ಶಾರದ, ಸಾರಿಕಾ ನಾಗರತ್ನ ನಾಡ, ಶೋಭಾ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಹಂಚು ಕಾರ್ಮಿಕ ಸಂಘ, ಕಟ್ಟಡ ಕಾರ್ಮಿಕ ಸಂಘ, ಅಂಗನವಾಡಿ ಸಂಘ ಹಾಗೂ ಬೀಡಿ ಫೆಡರೇಶನ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

More like this
Related

ಮೊದಲು ನಾಯಕನ ಆಯ್ಕೆ ಆಗಲಿ, ಉಳಿದ ನಿರ್ಧಾರಗಳು ನಂತರ: ಸತೀಶ್ ಜಾರಕಿಹೊಳಿ

ಬೆಂಗಳೂರು: ಕರ್ನಾಟಕದ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆ,...

ನೌಶೀನ್ ನಾಜ್ ದ್ವಿಗೋಲಿನ ಮಿಂಚು: ಮಹಿಳಾ U-18 ಹಾಕಿ ಏಷ್ಯಾಕಪ್‌ನಲ್ಲಿ ಭಾರತಕ್ಕೆ ಗೆಲುವಿನ ಆರಂಭ

ಜಪಾನ್‌: ಕಾಕಮಿಗಹಾರಾದಲ್ಲಿ ನಡೆಯುತ್ತಿರುವ U-18 ಮಹಿಳಾ ಹಾಕಿ ಏಷ್ಯಾಕಪ್ 2026 ಟೂರ್ನಿಯಲ್ಲಿ...

ಪಿಣರಾಯಿ ವಿಜಯನ್ ಪುತ್ರಿ ವೀಣಾ ವಿಜಯನ್ ಇಡಿ ಪ್ರಕರಣ: ಪಿಣರಾಯಿ ವಿಜಯನ್ ಮೇಲೆ ಒತ್ತಡ ಹೆಚ್ಚಳ

'ಮಾಸಪ್ಪಡಿ' ಪ್ರಕರಣದಲ್ಲಿ ಮಹತ್ವದ ದಾಖಲೆಗಳು ವಶಕ್ಕೆ; ವೀಣಾ ವಿಜಯನ್‌ಗೆ ಇಡಿ ಸಮನ್ಸ್...

ಸಿಂಗಾಪುರ್ ಓಪನ್: ಸೆಮಿಫೈನಲ್‌ಗೆ ಸಾತ್ವಿಕ್-ಚಿರಾಗ್, ಧ್ರುವ್-ತನಿಷಾ ಭರ್ಜರಿ ಎಂಟ್ರಿ

ಸಿಂಗಾಪುರ್: ಸಿಂಗಾಪುರ್ ಇಂಡೋರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸಿಂಗಾಪುರ್ ಓಪನ್ 2026 ಬ್ಯಾಡ್ಮಿಂಟನ್...

Copying is disabled on Udupi Digital News.