Wednesday, June 24, 2026

ಪೆರ್ಡೂರು ಅನಂತ ದೇವಸ್ಥಾನದ ಜೀರ್ಣೋದ್ಧಾರ ಸೂಕ್ತ ಸಮಯದಲ್ಲಿ ಭವ್ಯವಾಗಿ ನೆರವೇರಲಿ – ವಿದ್ಯಾಸಾಗರತೀರ್ಥ ಶ್ರೀ

ಜೀರ್ಣೋದ್ಧಾರ ಸಮಿತಿ ಕಾರ್ಯಾಲಯದ ಉದ್ಘಾಟನೆ

ಉಡುಪಿ: ಪೆರ್ಡೂರು ಶ್ರೀ ಅನಂತ ದೇವಸ್ಥಾನದ ಜೀರ್ಣೋದ್ದಾರ ಕಾರ್ಯ ಪ್ರಶಂಸನೀಯ. ಪದ್ಮನಾಭ ಸೃಷ್ಟಿಯ ಪಾಲನೆ ಮಾಡುವ ದೇವರು.ನಮಗೆ ಈ ಅವಕಾಶ ಒದಗಿ ಬಂದಿದೆ.ಇದಕ್ಕೆ ವಿಶೇಷ ಫಲ ಸಿಗಲಿದೆ. ಊರವರು ತಮ್ಮ ಊರಿನ ಜೀರ್ಣೋದ್ದಾರಕ್ಕೆ ಸಹಕಾರ ನೀಡಬೇಕು.ಈ ಮೂಲಕ ದೇವರ ವಿಶೇಷ ಅನುಗ್ರಹಕ್ಕೆ ಪಾತ್ರರಾಗಬೇಕು.ಈ ದೇವಸ್ಥಾನದ ಜೀರ್ಣೋದ್ಧಾರ ಸೂಕ್ತ ಸಮಯದಲ್ಲಿ ಭವ್ಯವಾಗಿ ನೆರವೇರಲಿ ಎಂದು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಗಳು ಆಶೀರ್ವಚನ ನೀಡಿದರು. ಅವರು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯಾಲಯದ ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದರು.

ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ದೇವರಿಗೋಸ್ಕರ ಅಲ್ಲ, ಭಕ್ತರಿಗೋಸ್ಕರ. ಇದರ ಫಲವಾಗಿ ದೇವರು ನಮಗೆ ಹತ್ತು ಪಾಲು ವಾಪಾಸು ಕೊಡ್ತಾನೆ. ದೇವಸ್ಥಾನ ನಿರ್ಮಾಣ ಮಾಡಿದರೆ ನಮಗೆ ಶ್ರೇಯ ದೊರಕುತ್ತದೆ.ಭಕ್ತರಾದ ನಾವು ದೇವರ ಆರಾಧನೆ ಮಾಡಿ ದೇವರಿಂದ ಫಲ ನಿರೀಕ್ಷೆ ಮಾಡ್ತೇವೆ.ಇದು ನನ್ನ ಕರ್ತವ್ಯ ಎಂಬ ಮನಸಿನಲ್ಲಿ ಮಾಡಿದಾಗ ದೇವರ ಅನುಗ್ರಹ ನಮಗೆ ಸಿಗುತ್ತದೆ ಎಂದರು.

ಸಭಾ ಕಾರ್ಯಕ್ರಮದಲ್ಲಿ ದೇವಸ್ಥಾನದ ತ್ರಿಡಿ ವಿಡಿಯೋ ಅನಾವರಣ ಮಾಡಲಾಯಿತು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶಾಂತರಾಮ ಸೂಡ ಕೆ. ಅಧ್ಯಕ್ಷತೆ ವಹಿಸಿದ್ದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೇವಾ ಕಚೇರಿಯನ್ನು ಉದ್ಘಾಟಿಸಿದರು. ಮಾಜಿ ಸಚಿವ ವಿನಯಕುಮಾರ್ ಸೊರಕೆ ದೇವಸ್ಥಾನದ ಜೀರ್ಣೋದ್ಧಾರದ ಯೋಜಿತ ಮಾದರಿಯನ್ನು ಅನಾವರಣಗೊಳಿಸಿದರು. ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಮಾಹಿತಿ ಕೇಂದ್ರ ಉದ್ಘಾಟಿಸಿದರು.

ತುಳುಕೂಟ ಬೆಂಗಳೂರು ಇದರ ಅಧ್ಯಕ್ಷ ಬಿ. ದಿನೇಶ್ ಹೆಗ್ಡೆ ಯೋಜಿತ ನಕ್ಷೆಯ ವಿಡಿಯೋ ಅನಾವರಣ ಮಾಡಿದರು. ಹಿರಿಯ ಅರ್ಚಕ, ಸಮಿತಿಯ ಗೌರವಾಧ್ಯಕ್ಷ ಪಿ. ಕೃಷ್ಣ ಅಡಿಗ ಗಣಕಯಂತ್ರ ಚಾಲನೆ ನೀಡಿದರು. ಶ್ರೀಕ್ಷೇತ್ರದ ತಂತ್ರಿಗಳಾದ ಕೆ.ಜಿ. ವಿಠಲ ತಂತ್ರಿ ಕೊರಂಗ್ರಪಾಡಿ, ಕೆ.ಪಿ. ಕುಮಾರಗುರು ತಂತ್ರಿ ಕೊರಂಗ್ರಪಾಡಿ, ದೇವಳದ ವಾಸ್ತುತಜ್ಞ ಸುಬ್ರಹ್ಮಣ್ಯ ಭಟ್ ಗುಂಡಿಬೈಲು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಮೋದ್ ರೈ ಪಳಜೆ, ಕಾರ್ಯನಿರ್ವಹಣಾಧಿಕಾರಿ ಗುರುರಾಜ್ ಪಿ.ಆರ್., ಸರದಿ ಅರ್ಚಕ ಪಿ. ಶ್ರೀಧರ ಅಡಿಗ ಉಪಸ್ಥಿತರಿದ್ದರು.

ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಲಾಲ್ ಪಕ್ಕಾಲ್ ಸ್ವಾಗತಿಸಿದರು.

More like this
Related

ಉಡುಪಿ: ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ: ಸದಸ್ಯತ್ವದ ಕಾರ್ಡ್ ವಿತರಣೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ...

ಉದ್ಯಾವರ ಪಾಪನಾಶಿನಿ ಸೇತುವೆಯಿಂದ ಜಿಗಿದು ಯುವಕ ಆತ್ಮಹತ್ಯೆ

ಉಡುಪಿ: ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನವನ್ನು ಇಟ್ಟು...

ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿ ಹೊಸ ಅಧ್ಯಕ್ಷರನ್ನು ಘೋಷಿಸಿದ ಟಿಎಂಸಿ ಬಂಡಾಯ ಬಣ

ಕೊಲ್ಕಾತಾ: ತೃಣಮೂಲ ಕಾಂಗ್ರೆಸ್ ಪಕ್ಷದ ಬಂಡಾಯ ಬಣವು ಮಮತಾ ಬ್ಯಾನರ್ಜಿ ಅವರನ್ನು...

Copying is disabled on Udupi Digital News.