Sunday, July 5, 2026

‘ವಾಲ್ಬೆಲ್ಲ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಸ್ವೀಕರಿಸಿದ ಸಚಿವ ಯು.ಟಿ. ಖಾದರ್

ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯದ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಹಾಗೂ ಯಡಾಡಿ ಮತ್ಯಾಡಿ ಸುಜ್ಞಾನ ಎಜುಕೇಶನ್ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ಜು.6 ರಂದು ವಿದ್ಯಾರಣ್ಯ ಶಾಲಾ ಆವರಣದಲ್ಲಿ ಆಯೋಜಿಸಲಾಗಿರುವ ಕುಂದಾಪ್ರ ಕನ್ನಡ ಭಾಷಿಕ ಪ್ರದೇಶದ ವಿದ್ಯಾರ್ಥಿಗಳ ಸಾಂಸ್ಕೃತಿಕ ಹಾಗೂ ಚಿತ್ರಕಲಾ ಸ್ಪರ್ಧೆ – “ವಾಲ್ಬೆಲ್ಲ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶನಿವಾರ ಸಂಜೆ ಕುಂದಾಪುರದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ನೀಡಲಾಯಿತು.

ಆಮಂತ್ರಣ ಪತ್ರಿಕೆ ಸ್ವೀಕರಿಸಿ ಮಾತನಾಡಿದ ಸಚಿವ ಖಾದರ್ ಅವರು ಭಾಷೆಗಳು ಕೇವಲ ಮಾತನಾಡುದಕ್ಕೆ ಮಾತ್ರ‌ ಸೀಮಿತವಾಗಬಾರದು. ನಮ್ಮ ಭೌಗೋಳಿಕ ವ್ಯಾಪ್ತಿಯ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಪರಂಪರೆಯ ರಾಯಭಾರದಂತಿರಬೇಕು.

ಕುಂದಾಪ್ರ ಭಾಗದ ಸಂಸ್ಕೃತಿ, ಭಾಷೆ ಮತ್ತು ಕಲೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಆಯೋಜಿಸಿರುವ ಈ ಸಾಂಸ್ಕೃತಿಕ ಹಾಗೂ ಚಿತ್ರಕಲಾ ಸ್ಪರ್ಧೆ ಅತ್ಯಂತ ಶ್ಲಾಘನೀಯ. ಇಂತಹ ಕಾರ್ಯಕ್ರಮಗಳು ಕೇವಲ ಸ್ಪರ್ಧೆಗಳಲ್ಲ; ನಮ್ಮ ನೆಲದ ಇತಿಹಾಸ, ಹಿರಿಯರ ತ್ಯಾಗ, ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಯುವಜನಾಂಗಕ್ಕೆ ತಲುಪಿಸುವ ಜೀವಂತ ಸೇತುವೆಗಳಾಗಿವೆ. ತಂತ್ರಜ್ಞಾನದ ಯುಗದಲ್ಲಿ ಆಧುನಿಕ ಶಿಕ್ಷಣದ ಜೊತೆಗೆ ನಮ್ಮ ಬೇರುಗಳ ಪರಿಚಯವೂ ಮಕ್ಕಳಿಗೆ ಅಗತ್ಯವಾಗಿದೆ. ಚಿತ್ರಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವುದರೊಂದಿಗೆ ತಮ್ಮ ನೆಲದ ಬಗ್ಗೆ ಹೆಮ್ಮೆ ಮತ್ತು ಅಭಿಮಾನವನ್ನು ಬೆಳೆಸಿಕೊಳ್ಳುತ್ತಾರೆ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಹಾಗೂ ಸುಜ್ಞಾನ ಎಜುಕೇಶನ್ ಟ್ರಸ್ಟ್‌ನ ಕಾರ್ಯ ಪ್ರಶಂಸನೀಯ ಎಂದರು.

ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯ, ಮಾಜಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ, ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ, ಅಧ್ಯಯನ ಪೀಠದ ಸದಸ್ಯರಾದ ರಾಜೇಶ್ ಕೆ.ಸಿ, ಉದಯ್ ಶೆಟ್ಟಿ ಪಡುಕರೆ, ಟ್ರಸ್ಟ್ ಕೋಶಾಧಿಕಾರಿ ಭರತ್ ಶೆಟ್ಟಿ , ಪೊಲೀಸ್ ನಿರೀಕ್ಷಕ ಜಯರಾಮ್ ಗೌಡ, ಎಸ್‌ಐ ನಂಜಾ ನಾಯ್ಕ್‌ ಇದ್ದರು.

More like this
Related

ಪ್ರಾಕೃತಿಕ ವಿಕೋಪ ಗಳನ್ನು ಎದುರಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು : ಯು ಟಿ ಖಾದರ್

ಉಡುಪಿ: ಮಳೆಗಾಲದ ಪ್ರಾಕೃತಿಕ ವಿಕೋಪ ಗಳನ್ನು ಎದುರಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ...

ಮಣಿಪಾಲದ ಶಾಲಾಬಸ್ಅಪಘಾತಪ್ರಕರಣ: ಡ್ರೈವಿಂಗ್ ಲೈಸನ್ಸ್ ಹೊಂದಿರದೆ ಬಸ್ ಚಲಾಯಿಸಿದ  ಕಂಡಕ್ಟರ್ ಬಂಧನ

ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಲಾ ಬಸ್ ಅಪಘಾತ ಪ್ರಕರಣದ...

ಕೆ.ಆರ್. ವೃತ್ತದಲ್ಲಿ ಬಿಎಂಟಿಸಿ ಬಸ್‌ಗಳ ಭೀಕರ ಡಿಕ್ಕಿ: ಚಾಲಕ ಸೇರಿ 16 ಮಂದಿಗೆ ಗಾಯ

ಬೆಂಗಳೂರು: ನಗರದ ಹೃದಯಭಾಗವಾದ ಕೆ.ಆರ್. ವೃತ್ತದಲ್ಲಿ ಶನಿವಾರ ಬೆಳಗ್ಗೆ ಎರಡು ಬಿಎಂಟಿಸಿ...

ಮೂಡುಬಿದಿರೆಯಲ್ಲಿ ನಾಪತ್ತೆಯಾಗಿದ್ದ ಕಾರ್ತಿಕ್ ಶೆಟ್ಟಿ ಮೃತದೇಹ ಪತ್ತೆ; ಹೃದಯಾಘಾತ ಶಂಕೆ

ಮೂಡುಬಿದಿರೆ: ಗುರುವಾರದಿಂದ ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲನಿ ಸಮೀಪದ ಬಂಗೇರಬೆಟ್ಟು ನಿವಾಸಿ...

Copying is disabled on Udupi Digital News.