Sunday, September 13, 2026

ಮೊವಾಡಿ ಶಾಲಾ ಮಕ್ಕಳ ಅಪಘಾತ ಪ್ರಕರಣ: ಬಸ್ ಚಾಲಕನಿಗೆ 1 ವರ್ಷ 17 ದಿನ ಜೈಲು

ಕುಂದಾಪುರ: ಎಂಟು ಶಾಲಾ ಮಕ್ಕಳ ಸಾವಿಗೆ ಕಾರಣವಾಗಿದ್ದ ಮೊವಾಡಿ ರಸ್ತೆ ಅಪಘಾತ ಪ್ರಕರಣಕ್ಕೆ 10 ವರ್ಷಗಳ ಬಳಿಕ ನ್ಯಾಯಾಲಯ ಅಂತಿಮ ತೀರ್ಪು ನೀಡಿದೆ.

ರಾಷ್ಟ್ರೀಯ ಹೆದ್ದಾರಿ 66ರ ಮೊವಾಡಿ ಡಾನ್ ಬಾಸ್ಕೋ ಶಾಲಾ ಕ್ರಾಸ್ ಬಳಿ 2016ರಲ್ಲಿ ಸಂಭವಿಸಿದ್ದ ಅಪಘಾತ ಪ್ರಕರಣದಲ್ಲಿ ಆರೋಪಿ ಖಾಸಗಿ ಬಸ್ ಚಾಲಕ ಮಂಜುನಾಥ ತ್ರಾಸಿ ಅವರಿಗೆ 1 ವರ್ಷ 17 ದಿನಗಳ ಸಾಧಾರಣ ಜೈಲು ಶಿಕ್ಷೆ ಹಾಗೂ 12,500 ರೂ. ದಂಡ ವಿಧಿಸಿ ಕುಂದಾಪುರದ ಮೂರನೇ ಹೆಚ್ಚುವರಿ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಮಣಿಕಂಠ ಎಂ.ಎಸ್. ಅವರು ಈ ತೀರ್ಪು ಪ್ರಕಟಿಸಿದ್ದಾರೆ.

2016ರ ಜೂನ್ 21ರಂದು ಬೆಳಗ್ಗೆ 9.25ರ ಸುಮಾರಿಗೆ ಹೆಮ್ಮಾಡಿ ಕಡೆಯಿಂದ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮ್ನಿ ಕಾರು ಮೊವಾಡಿ ಕ್ರಾಸ್ ಬಳಿ ಶಾಲಾ ರಸ್ತೆಯತ್ತ ತಿರುಗುತ್ತಿದ್ದಾಗ, ತ್ರಾಸಿ ಕಡೆಯಿಂದ ಕುಂದಾಪುರದತ್ತ ವೇಗ ಹಾಗೂ ಅಜಾಗರೂಕತೆಯಿಂದ ಬರುತ್ತಿದ್ದ ಬಸ್ ಢಿಕ್ಕಿ ಹೊಡೆದಿತ್ತು ಎಂದು ಪ್ರಕರಣದಲ್ಲಿ ಆರೋಪಿಸಲಾಗಿತ್ತು.

ಅಪಘಾತದಲ್ಲಿ ಓಮ್ನಿಯಲ್ಲಿದ್ದ ಅನನ್ಯ ಡಿಸಿಲ್ವಾ, ನಿಖಿತ್ ಡಿಸಿಲ್ವಾ, ರಾಯಸ್ಟನ್ ಲೋಬೋ, ಕ್ಲೇರಿಸಾ, ಅನ್ಸಿಟಾ ಓಲೇವಿರಾ, ಆಲ್ವಿಟಾ ಓಲೇವಿರಾ, ಬೆಲ್ವಿನ್ ಡಯಾಸ್ ಹಾಗೂ ಕೆಲಿಸ್ಟಾ ಮೃತಪಟ್ಟಿದ್ದರು. ಇನ್ನು ಕೆಲವು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಿನ ವೃತ್ತ ನಿರೀಕ್ಷಕ ಸುದರ್ಶನ ಹಾಗೂ ನಂತರ ರಾಘವ ಎಸ್. ಪಡೀಲ್ ಅವರು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಉಮಾ ದಾಮೋದರ ನಾಯ್ಕ ಅವರು ವಾದ ಮಂಡಿಸಿದ್ದರು.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.