Saturday, September 19, 2026

ಅಕ್ಟೋಬರ್ 18ರಂದು ಉಚ್ಚಿಲ ದಸರಾ ಉತ್ಸವದಲ್ಲಿ ಪುರುಷರ ಹುಲಿ ಕುಣಿತ ಸ್ಪರ್ಧೆ ‘ಪಿಲಿ ಪಂಥ’   

ಉಚ್ಚಿಲ: ಶ್ರೀ ಕ್ಷೇತ್ರ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 18ರಂದು ಪ್ರಪ್ರಥಮ ಬಾರಿಗೆ ಆಹ್ವಾನಿತ ತಂಡಗಳ ಪುರುಷರ ಹುಲಿ ಕುಣಿತ ಸ್ಪರ್ಧೆ ‘ಅಬ್ಬರದ ಪಿಲಿ ಪಂಥ 2026 – ಸೀಸನ್ 1’ ನಡೆಯಲಿದೆ.

ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನದ ವತಿಯಿಂದ ಉಡುಪಿ ಉಚ್ಚಿಲ ದಸರಾ ಸಮಿತಿಯ ಸಹಯೋಗದಲ್ಲಿ ನಡೆಯಲಿರುವ ಈ ಸ್ಪರ್ಧೆಯು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಉತ್ಸವದ ಮುಖ್ಯ ವೇದಿಕೆಯಲ್ಲಿ ಬೆಳಿಗ್ಗೆ 10.30ರಿಂದ ಆರಂಭಗೊಳ್ಳಲಿದೆ.

ಸ್ಪರ್ಧೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪ್ರತಿಷ್ಠಿತ 10 ಆಹ್ವಾನಿತ ಹುಲಿ ಕುಣಿತ ತಂಡಗಳು ಭಾಗವಹಿಸಲಿವೆ.

ಸ್ಪರ್ಧೆಯ ಪ್ರಥಮ ಬಹುಮಾನವಾಗಿ ₹3 ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನವಾಗಿ ₹2 ಲಕ್ಷ ನಗದು ಹಾಗೂ ಟ್ರೋಫಿ ಮತ್ತು ತೃತೀಯ ಬಹುಮಾನವಾಗಿ ₹1 ಲಕ್ಷ ನಗದು ಹಾಗೂ ಟ್ರೋಫಿ ನೀಡಲಾಗುವುದು. ಇದರೊಂದಿಗೆ ಮೂರು ವೈಯಕ್ತಿಕ ವಿಭಾಗಗಳಲ್ಲಿ ತಲಾ ₹10 ಸಾವಿರ ನಗದು ಬಹುಮಾನ ನೀಡಲಾಗುತ್ತದೆ.

ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಂದು ತಂಡಕ್ಕೂ ₹25 ಸಾವಿರ ಪ್ರೋತ್ಸಾಹಧನ ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಕರಾವಳಿ ಕರ್ನಾಟಕದ ವಿಶಿಷ್ಟ ಜನಪದ ಹಾಗೂ ಸಾಂಸ್ಕೃತಿಕ ಪರಂಪರೆಯಾದ ಹುಲಿ ಕುಣಿತ ಕಲೆಗೆ ಹೊಸ ವೇದಿಕೆ ಕಲ್ಪಿಸಿ, ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ವಿಶೇಷ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

More like this
Related

ಬ್ರಹ್ಮಾವರ ಗಣೇಶೋತ್ಸವ ಮೆರವಣಿಗೆಯಲ್ಲಿ ಸೌಹಾರ್ದತೆಯ ಸಂದೇಶ

ಭಕ್ತರಿಗೆ ಸಿಹಿತಿಂಡಿ, ತಂಪುಪಾನೀಯ ವಿತರಿಸಿದ ಯುವ ಕಾಂಗ್ರೆಸ್ ಮುಖಂಡರು ಬ್ರಹ್ಮಾವರ: ಬ್ರಹ್ಮಾವರದ ಶ್ರೀ...

ತುಳುವಿಗೆ ರಾಜ್ಯದ 2ನೇ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ: ಪ್ರಸಾದ್ ರಾಜ್ ಕಾಂಚನ್ ಅಭಿನಂದನೆ

ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ; ತುಳು ಭಾಷೆ–ಸಂಸ್ಕೃತಿಯ...

ಭಾರತದಾದ್ಯಂತ ಆತಂಕ ಸೃಷ್ಟಿಸಲು ISI ಡಾಕ್ಸಿಂಗ್ ತಂತ್ರ: ನಾಗರಿಕರು, ಅಧಿಕಾರಿಗಳ ಗುರಿ

ನವದೆಹಲಿ: ಭಾರತೀಯ ನಾಗರಿಕರು, ಸರ್ಕಾರಿ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು...

ವಂದೇ ಮಾತರಂನ ಎರಡು ಚರಣಗಳ ಗಾಯನಕ್ಕೆ ಕರ್ನಾಟಕ ಬಿಜೆಪಿ ಶಾಸಕ ಆಕ್ಷೇಪ

ಶಿವಮೊಗ್ಗ (ಕರ್ನಾಟಕ): ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಶನಿವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

Copying is disabled on Udupi Digital News.