Sunday, September 13, 2026

ಶೆಟ್ರಕಟ್ಟೆ: ಅಪಘಾತಕ್ಕೆ ಕಾರಣವಾದ ಟಿಪ್ಪರ್ ಗೆ ಇನ್ಸೂರೆನ್ಸ್ ಇಲ್ಲ!

ನಿಯಮ ಉಲ್ಲಂಘಿಸಿ ಮಣ್ಣು ಸಾಗಾಟ. ಇನ್ಸೂರೆನ್ಸ್ ಇಲ್ಲದ ಟಿಪ್ಪರ್

ಕುಂದಾಪುರ: ಶೆಟ್ರಕಟ್ಟೆ ಟಿಪ್ಪರ್ ಹಾಗೂ ಸರ್ಕಾರಿ ಬಸ್ ನಡುವಿನ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ಟಿಪ್ಪರ್ ಚಾಲಕ ಸೇರಿದಂತೆ ಮೂವರ ವಿರುದ್ದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಟಿಪ್ಪರ್ ಚಾಲಕ ರಾಘವೇಂದ್ರ, ಮಾಲೀಕರಾದ ಸುಮ ಹಾಗೂ ಮಣ್ಣು ಮಾಲೀಕ ಮಂಜುನಾಥ್‌ ವಿರುದ್ದ ಕೆಎಸ್ಆರ್ಟಿಸಿ ಕುಂದಾಪುರ ಘಟಕದ ಸಂಚಾರಿ ನಿರೀಕ್ಷಕ ದೇವಿದಾಸ್‌ ಟಿ ಬೋರಕರ ಕೊಟ್ಟ ದೂರಿನಂತೆ ಪ್ರಕರಣ ದಾಖಲಾಗಿದೆ.

ಟಿಪ್ಪರ್‌ ಚಾಲಕನು ವಾಹನದ ಪರವಾನಿಗೆ ನಿಯಮ ಉಲ್ಲಂಘಿಸಿ ಮಿತಿ ಮೀರಿದ ಮಣ್ಣು ಟಿಪ್ಪರ್‌ ನಲ್ಲಿ ತುಂಬಿಸಿಕೊಂಡು ಬಂದಿರುವುದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.

ಇನ್ಸೂರೆನ್ಸ್ ಇಲ್ಲದ ಟಿಪ್ಪರ್:
ಅಪಘಾತದ ಬಳಿಕ ಟಿಪ್ಪರ್ ದಾಖಲೆಗಳನ್ನು ಪರಿಶೀಲಿಸಿದಾಗ ಟಿಪ್ಪರ್ ನ ಇನ್ಸೂರೆನ್ಸ್ ಇಲ್ಲದೇ ಇರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 01/2026 ಕಲಂ: 110, 303(2) ಬಿಎನ್ಎಸ್ & 4(1ಎ), 21(4)ಎಮ್ಎಮ್ಆರ್ಡಿ ಕಾಯ್ದೆ & 183, 146, 192 182 ಐಎಮ್ ವಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.