Monday, September 14, 2026

ಪರ್ಯಾಯಕ್ಕೆ ವಿಶೇಷ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೌರಭ್ ಬಲ್ಲಾಳ್, ಅರ್ಜುನ್ ನಾಯರಿ ಅಭಿನಂದನೆ


ಉಡುಪಿಯಲ್ಲಿ ಜರುಗಲಿರುವ ಶೀರೂರು ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ವಿಶೇಷ ಮುತುವರ್ಜಿಯಿಂದ ಜಿಲ್ಲಾ ಖನಿಜ ಪ್ರತಿಷ್ಠಾನದಲ್ಲಿ ದೀರ್ಘಕಾಲದಿಂದ ಬಳಕೆಯಾಗದ ನಿಧಿಯನ್ನು ಉಡುಪಿಯ ರಸ್ತೆ ಅಭಿವೃದ್ಧಿ ಸೇರಿ ಪರ್ಯಾಯ ಮಹೋತ್ಸವಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲಾ ಖನಿಜಾ ಪ್ರತಿಷ್ಠಾನಕ್ಕೆ ನಿರ್ದೇಶನವನ್ನು ನೀಡಿ ಆರು ಕೋಟಿ ರೂಪಾಯಿಗಳ ಗರಿಷ್ಠ ಮೊತ್ತದ ಅನುದಾನವನ್ನು ಒದಗಿಸಿರುವುದು ಬಹಳ ಸಂತೋಷದ ವಿಷಯವಾಗಿದೆ.

ಇಂತಹ ದೊಡ್ಡ ಮೊತ್ತದ ಅನುದಾನವನ್ನು ಒದಗಿಸುವಲ್ಲಿ ಸಹಕರಿಸಿದ ರಾಜ್ಯ ಸರ್ಕಾರಕ್ಕೆ, ಕಾಂಗ್ರೆಸ್ ಪಕ್ಷದ ನಾಯಕರಿಗೆ ಹಾಗೂ ಜಿಲ್ಲೆಯ ಶಾಸಕರುಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಅರ್ಜುನ್ ನಾಯರಿ, ಉಡುಪಿ ಜಿಲ್ಲಾ ಎನ್.ಎಸ್.ಯು.ಐ ಅಧ್ಯಕ್ಷ ಸೌರಭ್ ಬಲ್ಲಾಳ್ ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.