Tuesday, July 28, 2026

ಜು.31 ರಿಂದ ಆ.2 ವರೆಗೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಸ್ವದೇಶಿ ಖಾದ್ಯ ಮೇಳ

ಉಡುಪಿ: ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಿ – ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸಿ ಎಂಬ ಧ್ಯೇಯದೊಂದಿಗೆ ಜು.31 ರಿಂದ ಆ.2 ವರೆಗೆ “ಸ್ವದೇಶಿ ಖಾದ್ಯ ಮೇಳ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮಾಜ ಸೇವಕ, ಕಾಂಗ್ರೆಸ್ ಮುಖಂಡ, ಅನೇಕ ದೈವ-ದೇವಸ್ಥಾನಗಳ ಜೀರ್ಣೋದ್ಧಾರದ ರೂವಾರಿಗಳೂ, ಕನ್ನರ್ಪಾಡಿ ಜಯದುರ್ಗ ಪರಮೇಶ್ವರಿ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷರಾದ ಕೆ.ಕೃಷ್ಣಮೂರ್ತಿ ಆಚಾರ್ಯ ಹೇಳಿದರು.

ಅವರು ಸೋಮವಾರ ಮಥುರ ಛತ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸ್ಥಳೀಯ ಉದ್ಯಮಿಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಶಕ್ತಿ ಇವೆಂಟ್ಸ್ ಇವರ ಸಹಯೋಗದಲ್ಲಿ, ಜಿಲ್ಲಾ ಕೃಷಿಕ ಸಮಾಜದ ಸಹಕಾರದೊಂದಿಗೆ ಸ್ವದೇಶಿ ಖಾದ್ಯ ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ 100 ಕ್ಕೂ ಅಧಿಕ ವಿವಿಧ ರೀತಿಯ ಮಳಿಗೆಗಳಿದ್ದು ಆ1 ರಂದು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆ ನೆರವೇರಲಿದೆ ಎಂದರು.

ಪ್ರತೀ ದಿನ ಬೆಳಿಗ್ಗೆ 10ರಿಂದ ರಾತ್ರಿ 10 ಗಂಟೆಯವರೆಗೆ ನಡೆಯಲಿರುವ ಈ ಖಾದ್ಯ ಮೇಳದಲ್ಲಿ ಸ್ವದೇಶಿ ತಿಂಡಿ-ತಿನಿಸುಗಳು, ತುಳುನಾಡಿನ ವಿಶೇಷ ತಿನಿಸುಗಳು, ವಿವಿಧ ನಮೂನೆಯ ದೋಸೆ, ಹತ್ತಾರು ಹಲಸಿನ ಹಣ್ಣಿನಿಂದ ತಯಾರಿಸುವ ಖಾದ್ಯಗಳು, ಮಳೆಗಾಲದ ವಿಶೇಷ ತಿನಿಸಿಗಳು, ಸ್ಥಳದಲ್ಲೇ ತಯಾರಿಸಿ ಕೊಡುವ ಹತ್ತಾರು ಲೈವ್ ಫುಡ್ ಗಳು, ಹಲವು ಸಾವಯವ ವಸ್ತುಗಳು, ಹಾಗೂ ಕರಕುಶಲ ವಸ್ತುಗಳು, ಫ್ಯಾನ್ಸಿ ವಸ್ತುಗಳು, ಗೃಹೋಪಯೋಗಿ ಸಾಮಗ್ರಿಗಳು, ಹಾಗೂ ಇತರೆ ಸ್ವದೇಶಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ

ಮೂರು ದಿನಗಳ ಕಾಲ ನಡೆಯಲಿರುವ ಈ ಮೇಳದಲ್ಲಿ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಸ್ಥಳೀಯ ಉದ್ಯಮಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ತಮ್ಮ ಉತ್ಪನ್ನಗಳನ್ನು ಪರಿಚಯಿಸಿ ವ್ಯಾಪಾರ ವಿಸ್ತರಿಸಿಕೊಳ್ಳಲು ಉತ್ತಮ ವೇದಿಕೆ ಇದಾಗಿದೆ. ಆ ಮೂಲಕ ಸ್ಥಳೀಯ ರೈತರಿಗೆ ಪ್ರೋತ್ಸಾಹ, ಸಾವಯವ ವಸ್ತುಗಳ ಸದ್ಬಳಕೆ ಹೆಚ್ಚಿಸಲು, ಮತ್ತು ಆರೋಗ್ಯಕರ ಸ್ವದೇಶಿ ಆಹಾರ ವಸ್ತುಗಳು ಹಾಗೆಯೇ ಸಾವಯವ ವಸ್ತುಗಳಿಗೆ ಹೆಚ್ಚಿನ ಆದ್ಯತೆ ನೀಡಿ ಪ್ರಚುರ ಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಚರಣ್ ರಾಜ್ ಬಂಗೇರಾ, ದಯಾನಂದ ಕಪ್ಪೆಟ್ಟು, ಸುನೀಲ್ ಕುಮಾರ್ ಗುರುಪ್ರಸಾದ್, ಅಮೃತಾ ಕೃಷ್ಣಮೂರ್ತಿ, ರವೀಂದ್ರ ಗುಜ್ಜರಬೆಟ್ಟು, ಸಂತೋಷ್, ಹರೀಶ್ ಇತರರು ಉಪಸ್ಥಿತರಿದ್ದರು.

More like this
Related

ದೇಶದಲ್ಲಿ ಚಳುವಳಿ ಹೆಸರಿನಲ್ಲಿ ಅರಾಜಕತೆ ಸೃಷ್ಟಿಸುವವರ ವಿರುದ್ದ ಜಿಲ್ಲಾ ಬಿಜೆಪಿ ಪ್ರತಿಭಟನೆ

ಉಡುಪಿ: ಚಳುವಳಿಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದು, ಕಾಕ್ರೋಚ್...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಪ್ಪಲ್ಲವೇ? ಬಿಜೆಪಿಗರು ಉತ್ತರಿಸಲಿ: ಕೋಳ್ಕೆರೆ ವಿಕಾಸ್ ಹೆಗ್ಡೆ

ಉಡುಪಿ: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶದ ಲಕ್ಷಾಂತರ...

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧ ಬಲವಂತದ ಕ್ರಮ ಬೇಡ – ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ನಡೆದ...

ರಾಜ್ಯದ ಬಾಕಿ ಯೋಜನೆಗಳ ನಿರ್ವಹಣೆಗೆ ದಿಲ್ಲಿಯ ಕರ್ನಾಟಕ ಭವನದಲ್ಲಿ ಹೊಸ ವ್ಯವಸ್ಥೆ ಜಾರಿ : ಸಿಎಂ ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ರಾಜ್ಯದ ಮೇಕೆದಾಟು ಅಣೆಕಟ್ಟು ಸೇರಿದಂತೆ ಬಾಕಿ ಯೋಜನೆಗಳ ನಿರ್ವಹಣೆಗೆ...

Copying is disabled on Udupi Digital News.