Tuesday, September 15, 2026

ಕರ್ತವ್ಯ ಬದ್ಧತೆ ಇರಬೇಕು: ನವೀನ್ ಲೋಬೊ

ನಾಡಾ ಐಟಿಐ ಸಂಸ್ಥೆಯಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

ಕುಂದಾಪುರ: ಕರ್ತವ್ಯ ಬದ್ಧತೆ ಇರುವ ಯಾರೂ, ಯಾರಿಗೂ ತಲೆಭಾಗಬೇಕಾದ ಸನ್ನಿವೇಶಗಳೇ ಬರೋದಿಲ್ಲ ಎಂದು ರೇ.ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜ ಸ್ಮಾರಕ ಸೊಸೈಟಿ ಕಾರ್ಯದರ್ಶಿ ನವೀನ್ ಲೋಬೊ ಹೇಳಿದರು.

ನಾಡಾ ಗ್ರಾಮದ ರೇ.ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜ ಸ್ಮಾರಕ ಐಟಿಐ ಸಂಸ್ಥೆಯಲ್ಲಿ ಗುರುವಾರ ನಡೆದ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಂತ್ರಿಕ ಶಿಕ್ಷಣಗಳು ಕೇವಲ ಅಭ್ಯಾಸಕ್ಕೆ ಮಾತ್ರ ಸೀಮಿತವಾಗದೆ ಭವಿಷ್ಯದ ಜೀವನ ಭದ್ರತೆಯನ್ನು ರೂಪಿಸುವ ತರಬೇತಿ ಕೇಂದ್ರಗಳಾಗಿದೆ. ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಯೋಗ್ಯ ಶಿಕ್ಷಣ ಅವಕಾಶ ದೊರಕಬೇಕು ಎನ್ನುವ ಉದ್ದೇಶದಿಂದ ದಿ.ಆಲ್ಫೋನ್ಸ್ ಲೋಬೊ ಅವರ ನೇತೃತ್ವದಲ್ಲಿ ಸ್ಥಾಪನೆಯಾದ ನಾಡಾ ಐಟಿಐ ಸಂಸ್ಥೆಯಿಂದ ಈವರೆಗೆ ಸಾವಿರಾರು ವಿದ್ಯಾರ್ಥಿಗಳು ತರಬೇತಿ ಪಡೆದು ಭವಿಷ್ಯ ರೂಪಿಸಿಕೊಂಡಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಮನೋಹರ್ ಆರ್ ಕಾಮತ್ ಅವರು, ಭಿನ್ನವಾದ ಶಿಕ್ಷಣಾಭ್ಯಾಸಗಳನ್ನು ಹೊಂದಿರುವ ಐಟಿಐ ತರಬೇತಿ ಪಡೆದವರಿಗೆ ಅತ್ಯಂತ ಉತ್ತಮವಾದ ಉದ್ಯೋಗ ಅವಕಾಶ ಇದೆ. ಕಳೆದ ಹಲವು ವರ್ಷಗಳಿಂದ ದೇಶ-ವಿದೇಶದ ಪ್ರಸಿದ್ಧ ಕಂಪನಿಗಳು ಕ್ಯಾಂಪಸ್ ಸಂದರ್ಶನ ನಡೆಸಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡುತ್ತಿದೆ. ಗುಣ ಮಟ್ಟದ ಶಿಕ್ಷಣದ ಜೊತೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು, ಶಿಸ್ತು ಹಾಗೂ ಮಾನವೀಯ ಮೌಲ್ಯಗಳ ಬೆಳವಣಿಗೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.

ಪ್ಲೇಸ್ಮೆಂಟ್ ಅಧಿಕಾರಿ ರಾಜೇಶ್ ಕೆ.ಸಿ, ಕಿರಿಯ ತರಬೇತಿ ಅಧಿಕಾರಿಗಳಾದ ಮೋಹನ್‌ಚಂದ್ರ ಪಿ ನಾಯಕ್, ದಿನೇಶ್ ಕೆ ಬೈಂದೂರು, ಆಡಳಿತ ಮಂಡಳಿ ಸದಸ್ಯೆ ಅನಿತಾ ನವೀನ್ ಲೋಬೊ ಇದ್ದರು.

ಕಿರಿಯ ತರಬೇತಿ ಅಧಿಕಾರಿ ರಾಘವೇಂದ್ರ ಆಚಾರ್ ಕಟ್‌ಬೇಲ್ತೂರ್ ಸ್ವಾಗತಿಸಿದರು, ವಿನಾಯಕ ಕಾಮತ್ ಪ್ರಾರ್ಥಿಸಿದರು, ಕಿಶೋರ್ ಪೂಜಾರಿ ಸಸಿಹಿತ್ಲು ನಿರೂಪಿಸಿದರು.

More like this
Related

ಕಸ್ತೂರಿ ರಂಗನ್ ವರದಿ ಜಾರಿ: ಪಶ್ಚಿಮಘಟ್ಟ ತಪ್ಪಲು ಪ್ರದೇಶದ ಜನರಲ್ಲಿ ಆತಂಕ : ಮುನಿಯಾಲು ಉದಯ್ ಕುಮಾರ್ ಶೆಟ್ಟಿ

ಸೆ.18ರಂದು ಸಾರ್ವಜನಿಕರ ಅಹವಾಲು ಆಲಿಸಲು ಹೆಬ್ರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್; ಬಾಧಿತ...

ಕಂಡ್ಲೂರು ಹಳೆ ಸೇತುವೆ ನೆಲಸಮದ ಹುನ್ನಾರದ ಹಿಂದೆ ಭ್ರಷ್ಟಾಚಾರದ ಅನುಮಾನ : ಕೆ. ವಿಕಾಸ್ ಹೆಗ್ಡೆ

ಕುಂದಾಪುರ ತೀರ್ಥಹಳ್ಳಿ ಸಂಪರ್ಕ ಮಾಡುವ ರಾಜ್ಯ ಹೆದ್ದಾರಿ ಹಾದು ಹೋಗುವ ವರಾಹಿ...

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

Copying is disabled on Udupi Digital News.