Friday, July 3, 2026

ಗಾಂಜಾ ಸೇವನೆ ಆರೋಪ: ಯುವಕನ ಬಂಧನ

ಮಂಗಳೂರು: ನಗರದ ಹೊಯ್ಗೆ ಬಜಾರ್ ಸಮೀಪ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಬೋಳಾರ ಫರ್ರಿರೋಡ್ ನಿವಾಸಿ ಪ್ರಿಯಾಂಶು ಬೋಳಾರ್ (24) ಎಂಬಾತನನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.

ಜೂನ್ 30ರಂದು ಸಂಜೆ 4 ಗಂಟೆ ಸುಮಾರಿಗೆ ಬೋಳಾರ ಪ್ರದೇಶದಲ್ಲಿ ಪ್ರಿಯಾಂಶು ಮಾದಕ ವಸ್ತು ಸೇವಿಸಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಬಳಿಕ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷೆಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More like this
Related

ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮಂಗಳೂರು: ಮಹಾರಾಷ್ಟ್ರದಿಂದ ಕೇರಳದ ಪೈನ್ನೂರಿಗೆ ಕುಟುಂಬದೊಂದಿಗೆ ತೆರಳುತ್ತಿದ್ದ ವಿಕಾಸ್ ಸುಬ್ಬುರಾವ್ ಧನವಡೆ...

ಇಡಿ ಮೇಲಿನ ದಾಳಿ ಪ್ರಕರಣ: ಸಿಬಿಐ ತನಿಖೆಗೆ ಕೇರಳ ಹೈಕೋರ್ಟ್ ನಿರಾಕರಣೆ

ಕೊಚ್ಚಿ: ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಅವರ ಪುತ್ರಿಯ ಬಾಡಿಗೆ...

ರಾಮನಗರದಲ್ಲಿ ಎಸ್‌ಐಆರ್‌ ನಿಯಮ ಉಲ್ಲಂಘನೆ ಆರೋಪ: ಕುಮಾರಸ್ವಾಮಿ ಆರೋಪ

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ವಿಶೇಷ ಮತದಾರರ ಪಟ್ಟಿಯ...

ಭಾರತೀಯ ಕಿರಿಯ ಮಹಿಳಾ ಹಾಕಿ ತಂಡ ಯುಕೆ ಪ್ರವಾಸಕ್ಕೆ ಪ್ರಯಾಣ; ಜುಲೈ 5ರಿಂದ ಏಳು ಪಂದ್ಯಗಳು

ಬೆಂಗಳೂರು: ಭಾರತೀಯ ಕಿರಿಯ ಮಹಿಳಾ ಹಾಕಿ ತಂಡವು 2026ರ ಜುಲೈ 5ರಿಂದ...

Copying is disabled on Udupi Digital News.