Monday, September 14, 2026

ಸುರತ್ಕಲ್ : ಹೊಸ ವರ್ಷಾಚರಣೆಗೆ ತಂದಿದ್ದ 21 ಕೆ.ಜಿ ಗಾಂಜಾ ವಶ; ಇಬ್ಬರು ಆರೋಪಿಗಳ ಬಂಧನ

ಸುರತ್ಕಲ್ : ಹೊಸ ವರ್ಷಾಚರಣೆಗೆಂದು ಮಾರಾಟ ಮಾಡಲು ತಂದಿದ್ದ ಸುಮಾರು 21ಕೆ.ಜಿ ಗಾಂಜಾವನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಉಳಾಯಿಬೆಟ್ಟು ಗ್ರಾಮ ನಿವಾಸಿ ಪ್ರದೀಪ್ ಪೂಜಾರಿ(32), ಬೈಕಂಪಾಡಿ ಚಿತ್ರಾಪುರ ನಿವಾಸಿ ವಸಂತ (42) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ‌.

ಬಂಧಿತರಿಂದ ಅಂದಾಜು 10,72,500 ರೂ‌. ಮೊತ್ತದ 21.450 ಕೆಜಿ ಗಾಂಜಾ, 3 ಮೊಬೈಲ್ ಫೋನ್‌ಗಳು, ಸಾಗಾಟಕ್ಕೆ ಬಳಸಿದ್ದ ಕಾರು ಸೇರಿದಂತೆ ಒಟ್ಟು 13,86,500 ರೂ. ಮೊತ್ತದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳು ಜ.3ರಂದು ಸುರತ್ಕಲ್‌ ಚೊಕ್ಕಬೆಟ್ಟು ಸಮೀಪ ಮಾರಾಟ ಮಾಡುವ ಸಲುವಾಗಿ ಗಾಂಜಾ ಶೇಖರಿಸಿಟ್ಟಿರುವ ಕುರಿತು ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಒರಿಸ್ಸಾದಿಂದ ಡಿ.29ರಂದು ಗಾಂಜಾ ತಂದು ಚೊಕ್ಕಬೆಟ್ಟುವಿನ ಮನೆಯಲ್ಲಿ ಶೇಖರಿಸಿಟ್ಟಿದ್ದರು. ಪೊಲೀಸ್ ಬಂದೋಬಸ್ತ್ ಹೆಚ್ಚಾಗಿದ್ದ ಕಾರಣ ಮಾರಾಟ ಮಾಡಲಾಗದೇ ಅದನ್ನು ಕಾರಿನಲ್ಲೇ ಇಟ್ಟಿರುವುದಾಗಿ ಬಂಧಿತರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅ.ಕ್ರ. 01/2026 ಕಲಂ: 8(C), 20(b)(ii),(C) ಎನ್‌ ಡಿಪಿಎಸ್‌ ಕಾಯ್ದೆಯಂತೆ ಪ್ರಕರಣ‌ ದಾಖಲಿಸಿಕೊಂಡಿದ್ದಾರೆ.

ಆರೋಪಿ ಪ್ರದೀಪ್ ಪೂಜಾರಿ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಎರಡು, ಬರ್ಕೆ, ಬೆಳ್ತಂಗಡಿ, ಧರ್ಮಸ್ಥಳ, ಮುಲ್ಕಿ, ಸುರತ್ಕಲ್, ಮಂಗಳೂರು ಉತ್ತರ ಪೊಲೀಸ್ ಠಾಣೆಗಳಲ್ಲಿ ತಲಾ‌ ಒಂದು ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳ ಪತ್ತೆ ಕಾರ್ಯದಲ್ಲಿ ಉತ್ತರ ಉಪ ವಿಭಾಗದ ಎ.ಸಿ.ಪಿ. ಶ್ರೀಕಾಂತ.ಕೆ. ಅವರು ಮತ್ತು ಅವರ ತಂಡದ ಸಿಬ್ಬಂದಿಗಳಾದ ಎ.ಎಸ್.ಐ ಚಂದ್ರಶೇಖರ್, ಎಚ್.ಸಿ ಗಳಾದ ರೆಜಿ.ಎಂ., ದಾಮೋದರ್, ಹಾಲೇಶ್ ನಾಯ್ಕ್, ಸುನೀಲ್ ಪಡನಾಡ, ಸಂಪತ್ ಹಾಗೂ ಸುರತ್ಕಲ್ ಠಾಣಾ ಪಿ.ಐ. ಪ್ರಮೋದ್ ಕುಮಾರ್, ಪಿ.ಎಸ್.ಐ ರಘುನಾಯ್ಕ್ ಮತ್ತು ಸಿಬ್ಬಂದಿಗಳಾದ ಅಣ್ಣಪ್ಪ, ಅಜಿತ್ ಮ್ಯಾಥ್ಯೂ, ಅಂಜಿನಪ್ಪ ಭಾಗವಹಿಸಿದ್ದರು.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.