Sunday, September 13, 2026

ರಂಗಶಿಕ್ಷಣ ಮಕ್ಕಳ ಜೀವನ ಪರಿವರ್ತನೆಗೆ ನಾಂದಿ : ಡಾ.ತಲ್ಲೂರು

ಉಡುಪಿ : ರಂಗಶಿಕ್ಷಣ ಮಕ್ಕಳ ಜೀವನ ಪರಿವರ್ತನೆಗೆ ನಾಂದಿಯಾಗಲಿದೆ. ಮಕ್ಕಳಲ್ಲಿ ಹುದುಗಿರುವ ಪ್ರತಿಭಾಶಕ್ತಿಯನ್ನು ಹೊರ ತರುವುದೇ ಈ ರಂಗಶಿಕ್ಷಣದ ಉದ್ದೇಶವಾಗಿದೆ. ನಮ್ಮ ಕನಸು ನನಸಾಗುತ್ತಿದೆ. 11 ಶಿಕ್ಷಣ ಸಂಸ್ಥೆಗಳ 250ಕ್ಕೂ ಅಧಿಕ ಮಕ್ಕಳು ರಂಗಶಿಕ್ಷಣ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ರಂಗಶಿಕ್ಷಣವನ್ನು ಇನ್ನಷ್ಟು ಶಾಲೆಗಳಿಗೆ ವಿಸ್ತರಿಸುವ ಚಿಂತನೆ ನಡೆದಿದೆ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.

ಅವರು ಮಂಗಳವಾರ ರಂಗಭೂಮಿ ಉಡುಪಿ ವತಿಯಿಂದ ಎಂಜಿಎo ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಂಡ ಎರಡು ದಿನಗಳ ರಂಗಭೂಮಿ ರಂಗ ಶಿಕ್ಷಣ ಅಭಿಯಾನದ ಮಕ್ಕಳ ನಾಟಕೋತ್ಸವದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಲ್ಲಾ ಕ್ಷೇತ್ರಗಳಲ್ಲಿಯೂ ನಿವೃತ್ತಿ ಎಂಬುದಿದೆ ಆದರೆ ಕಲಾವಿದರಿಗೆ ನಿವೃತ್ತಿಯಿಲ್ಲ. ಮಕ್ಕಳಿಗೆ ರಂಗ ಶಿಕ್ಷಣ ನೀಡಿ ಅವರನ್ನು ನಾಡಿನ ಉತ್ತಮ ನಾಗರಿಕರನ್ನಾಗಿಸುವ ರಂಗಭೂಮಿಯ ಈ ಅಭಿಯಾನದಲ್ಲಿ ಸಂಘಸoಸ್ಥೆಗಳು ಕೈ ಜೋಡಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಅದಾನಿ ಪವರ್‌ನ ಎಜಿಎಂ ರವಿ ಜರೆ ಮಾತನಾಡಿ, ಕಳೆದ 6 ದಶಕಗಳಿಂದ ರಂಗಭೂಮಿಯ ಕಂಪನ್ನು ನಾಡಿನ ಉದ್ದಗಲಕ್ಕೂ ಪಸರಿಸಿದ ರಂಗಭೂಮಿ ಉಡುಪಿ ಸಂಸ್ಥೆ ಇದೀಗ ಮಕ್ಕಳನ್ನು ನಾಟಕದತ್ತ ಸೆಳೆಯಲು ರಂಗ ಶಿಕ್ಷಣವನ್ನು ಹಮ್ಮಿಕೊಂಡಿರುವುದು ಅಭಿನಂದನಾರ್ಹ. ಮಕ್ಕಳ ವ್ಯಕ್ತಿತ್ವ ವಿಕಸನದ ಜೊತೆಗೆ ಭವಿಷ್ಯದ ರಂಗಭೂಮಿ ಕಲಾವಿದರನ್ನು ಕೊಡುವ ಈ ರಂಗಶಿಕ್ಷಣ ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆಯಾಗಿದೆ ಎಂದರು.

ಉದ್ಯಮಿ ಶ್ರೀಶ ನಾಯಕ್ ಪೆರಣಂಕಿಲ ಮಾತನಾಡಿ, ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳನ್ನು ನಾಟಕದತ್ತ ಸೆಳೆಯುವ ರಂಗಭೂಮಿ ಉಡುಪಿಯ ಪ್ರಯತ್ನ ಶ್ಲಾಘನೀಯ. ನಾಟಕದ ಮೂಲಕ ರಂಗಭೂಮಿ ಸಮಾಜವನ್ನು ಎಚ್ಚರಿಸುವ ಕಾರ್ಯ ನಡೆಸುತ್ತಿದೆ ಎಂದರು.
ರoಗಶಿಕ್ಷಣ ಯೋಜನೆಯ ಸಂಚಾಲಕ ವಿದ್ಯಾವಂತ ಆಚಾರ್ಯ ಸಮಾರೋಪ ಭಾಷಣ ಮಾಡಿದರು.

ಲಯನ್ಸ್ ಜಿಲ್ಲಾ ಗವರ್ನರ್ ಸುನೀಲ್ ಸಾಲ್ಯಾನ್ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರಂಗ ಶಿಕ್ಷಣ ಪಡೆದ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಹಾಗೂ ರಂಗಶಿಕ್ಷಣದ ಗುರುಗಳಿಗೆ ಗೌರವಾರ್ಪಣೆ ನಡೆಯಿತು.
ಉದ್ಯಮಿ ಜಮಾಲುದ್ದೀನ್ ಅಬ್ಬಾಸ್, ಎಂಜಿಎo ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ, ಆರ್‌ಆರ್‌ಸಿ ನಿರ್ದೇಶಕ ಡಾ.ಜಗದೀಶ್ ಶೆಟ್ಟಿ, ರಂಗಭೂಮಿ ಉಡುಪಿಯ ಉಪಾಧ್ಯಕ್ಷರುಗಳಾದ ರಾಜಗೋಪಾಲ್ ಬಲ್ಲಾಳ್ ಹಾಗೂ ಭಾಸ್ಕರ್ ರಾವ್ ಕಿದಿಯೂರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಪ್ರದೀಪಚಂದ್ರ ಕುತ್ಪಾಡಿ ಸ್ವಾಗತಿಸಿದರು. ರವಿರಾಜ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಅಮಿತಾಂಜಲಿ ಕಿರಣ್ ವಂದಿಸಿದರು.

ಈ ಸಂದರ್ಭದಲ್ಲಿ ಉಡುಪಿ ಬೈಲಕೆರೆ ಶ್ರೀ ಅನಂತೇಶ್ವರ ಪ್ರೌಢಶಾಲೆಯ ಮಕ್ಕಳಿಂದ ‘ಒಮ್ಮೆ ಸಿಕ್ಕರೆ ‘ ನಾಟಕ, ನಿಟ್ಟೂರು ಪ್ರೌಢಶಾಲಾ ಮಕ್ಕಳಿಂದ ‘ಕತ್ತಲೆ ನಗರ ತಲೆಕೆಟ್ಟ ರಾಜ ‘, ಕುಂಜಿಬೆಟ್ಟು ಟಿಎ ಪೈ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಂದ ‘ತಾರೆ ‘, ಸೈಂಟ್ ಸಿಸಿಲೀಸ್ ಪ್ರೌಢಶಾಲೆಯ ಮಕ್ಕಳಿಂದ ‘ಅಳಿಲು ರಾಮಾಯಣ ‘ ಹಾಗೂ ಇಂದ್ರಾಳಿ ಆಂಗ್ಲ ಮಾಧ್ಯಮ ಶಾಲಾ ಮಕ್ಕಳಿಂದ ‘ಎಂಡ್ ಇಲ್ಲದ ಬಂಡ್ ಅವತಾರ ‘ ನಾಟಕಗಳು ಪ್ರದರ್ಶನಗೊಂಡವು.
ಡಿ.29 ಹಾಗೂ 30ರಂದು ಎರಡು ದಿನಗಳ ಕಾಲ ನಡೆದ ಈ ನಾಟಕೋತ್ಸವದಲ್ಲಿ 11 ಶಿಕ್ಷಣ ಸಂಸ್ಥೆಗಳ 250ಕ್ಕೂ ಅಧಿಕ ಮಕ್ಕಳು ಭಾಗವಹಿಸಿ 11 ನಾಟಕಗಳನ್ನು ಪ್ರದರ್ಶಿಸಿದರು.

ಫೋಟೊ : ರಂಗಭೂಮಿ ಉಡುಪಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ರಂಗ ಶಿಕ್ಷಣ ಪಡೆದ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಹಾಗೂ ರಂಗಶಿಕ್ಷಣದ ಗುರುಗಳನ್ನು ಗೌರವಿಸಿದರು.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.