Tuesday, July 28, 2026

ಯುಪಿಯಲ್ಲಿ ಕಾಲೇಜು ರ್ಯಾಗಿಂಗ್ ಪ್ರಕರಣಗಳು ಅತಿ ಹೆಚ್ಚು: 2025ರಲ್ಲಿ 135 ದೂರುಗಳು ದಾಖಲು

ನವದೆಹಲಿ: 2025ರಲ್ಲಿ ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ (HEIs) ದಾಖಲಾಗಿರುವ ರ್ಯಾಗಿಂಗ್ ದೂರುಗಳ ಪೈಕಿ ಉತ್ತರ ಪ್ರದೇಶವು ಅತಿ ಹೆಚ್ಚು 135 ಪ್ರಕರಣಗಳೊಂದಿಗೆ ಮೊದಲ ಸ್ಥಾನದಲ್ಲಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.

ಶಿಕ್ಷಣ ಖಾತೆ ರಾಜ್ಯ ಸಚಿವ ಸುಕಾಂತ ಮಜುಂದಾರ್ ಅವರು ಜುಲೈ 22ರವರೆಗಿನ ಅಂಕಿಅಂಶಗಳನ್ನು ಹಂಚಿಕೊಂಡಿದ್ದು, ಉತ್ತರ ಪ್ರದೇಶದ ನಂತರ ಪಶ್ಚಿಮ ಬಂಗಾಳದಲ್ಲಿ 75, ಮಧ್ಯಪ್ರದೇಶದಲ್ಲಿ 63, ಮಹಾರಾಷ್ಟ್ರದಲ್ಲಿ 53 ಹಾಗೂ ಬಿಹಾರದಲ್ಲಿ 50 ರ್ಯಾಗಿಂಗ್ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದ್ದಾರೆ.

ಇದರ ಜೊತೆಗೆ, ರಾಜಸ್ಥಾನದಲ್ಲಿ 44, ಕರ್ನಾಟಕದಲ್ಲಿ 41, ಒಡಿಶಾದಲ್ಲಿ 36 ಹಾಗೂ ದೆಹಲಿಯಲ್ಲಿ 27 ಪ್ರಕರಣಗಳು ದಾಖಲಾಗಿವೆ ಎಂದು ಅವರು ಸಯಾನಿ ಘೋಷ್ ಅವರ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ.

107 ಶಿಕ್ಷಣ ಸಂಸ್ಥೆಗಳಿಗೆ ಯುಜಿಸಿ ನೋಟಿಸ್ 2025ರಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ರ್ಯಾಗಿಂಗ್ ತಡೆ ನಿಯಮಾವಳಿ–2009ರ ಕಡ್ಡಾಯ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ 18 ವೈದ್ಯಕೀಯ ಕಾಲೇಜುಗಳನ್ನು ಒಳಗೊಂಡಂತೆ ಒಟ್ಟು 107 ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಕಾರಣ ಕೇಳುವ ನೋಟಿಸ್ ಜಾರಿಗೊಳಿಸಿದೆ ಎಂದು ಸಚಿವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಕಡ್ಡಾಯವಾಗಿ ಪಡೆಯಬೇಕಾದ ಆಂಟಿ-ರ್ಯಾಗಿಂಗ್ ಘೋಷಣಾಪತ್ರಗಳನ್ನು ಸಂಗ್ರಹಿಸದಿರುವುದು, ಸಂಸ್ಥೆಯ ಅನುಸರಣೆ ವರದಿಯನ್ನು ಪದೇ ಪದೇ ಸೂಚನೆ ನೀಡಿದರೂ ಸಲ್ಲಿಸದಿರುವುದು ಸೇರಿದಂತೆ ಹಲವು ಲೋಪಗಳನ್ನು ಈ ನೋಟಿಸ್‌ಗಳಲ್ಲಿ ಉಲ್ಲೇಖಿಸಲಾಗಿದೆ.

ತಿದ್ದುಪಡಿ ಕ್ರಮಕ್ಕೆ ಆದ್ಯತೆ ರ್ಯಾಗಿಂಗ್ ನಿಯಂತ್ರಣಕ್ಕೆ ಸರ್ಕಾರ ದಂಡಾತ್ಮಕ ಕ್ರಮಕ್ಕಿಂತ ತಿದ್ದುಪಡಿ ಹಾಗೂ ತಡೆಗಟ್ಟುವ ಕ್ರಮಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಸಚಿವರು ಹೇಳಿದ್ದಾರೆ. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಕ್ಯಾಂಪಸ್ ವಾತಾವರಣವನ್ನು ಬಲಪಡಿಸುವ ಉದ್ದೇಶ ಸರ್ಕಾರದ್ದಾಗಿದೆ ಎಂದು ಅವರು ವಿವರಿಸಿದರು.

ನಿಯಮಗಳಲ್ಲಿ ಬದಲಾವಣೆ 2016ರಲ್ಲಿ ಯುಜಿಸಿ ರ್ಯಾಗಿಂಗ್ ನಿಯಂತ್ರಣ ನಿಯಮಾವಳಿಗೆ ಮೂರನೇ ತಿದ್ದುಪಡಿ ತಂದಿದ್ದು, ರ್ಯಾಗಿಂಗ್‌ನ ವ್ಯಾಖ್ಯಾನವನ್ನು ಮತ್ತಷ್ಟು ವಿಸ್ತರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ವಿದ್ಯಾರ್ಥಿಗಳಲ್ಲಿ ಜಾಗೃತಿ ಹೆಚ್ಚಿರುವುದರಿಂದ ದೂರುಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಸಹ ನಿಯಮಾವಳಿಯ ಪರಿಣಾಮಕಾರಿತ್ವವನ್ನು ತೋರಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಯುಜಿಸಿಯ ಪ್ರಮುಖ ಕ್ರಮಗಳು ರ್ಯಾಗಿಂಗ್ ತಡೆಗಟ್ಟಲು ಯುಜಿಸಿ ಪ್ರತಿ ವರ್ಷ ಎರಡು ಬಾರಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಲಹೆ ಹಾಗೂ ಮಾರ್ಗಸೂಚಿಗಳನ್ನು ನೀಡುತ್ತಿದೆ.

ಇದಲ್ಲದೆ,

More like this
Related

ದೇಶದಲ್ಲಿ ಚಳುವಳಿ ಹೆಸರಿನಲ್ಲಿ ಅರಾಜಕತೆ ಸೃಷ್ಟಿಸುವವರ ವಿರುದ್ದ ಜಿಲ್ಲಾ ಬಿಜೆಪಿ ಪ್ರತಿಭಟನೆ

ಉಡುಪಿ: ಚಳುವಳಿಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದು, ಕಾಕ್ರೋಚ್...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಪ್ಪಲ್ಲವೇ? ಬಿಜೆಪಿಗರು ಉತ್ತರಿಸಲಿ: ಕೋಳ್ಕೆರೆ ವಿಕಾಸ್ ಹೆಗ್ಡೆ

ಉಡುಪಿ: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶದ ಲಕ್ಷಾಂತರ...

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧ ಬಲವಂತದ ಕ್ರಮ ಬೇಡ – ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ನಡೆದ...

ರಾಜ್ಯದ ಬಾಕಿ ಯೋಜನೆಗಳ ನಿರ್ವಹಣೆಗೆ ದಿಲ್ಲಿಯ ಕರ್ನಾಟಕ ಭವನದಲ್ಲಿ ಹೊಸ ವ್ಯವಸ್ಥೆ ಜಾರಿ : ಸಿಎಂ ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ರಾಜ್ಯದ ಮೇಕೆದಾಟು ಅಣೆಕಟ್ಟು ಸೇರಿದಂತೆ ಬಾಕಿ ಯೋಜನೆಗಳ ನಿರ್ವಹಣೆಗೆ...

Copying is disabled on Udupi Digital News.