Saturday, June 13, 2026

ಬಕ್ರೀದ್ ಹಿನ್ನೆಲೆ ಹಾಸನ ಮುಸ್ಲಿಂ ಸಮುದಾಯದ ಮಹತ್ವದ ನಿರ್ಧಾರ; ಜಾನುವಾರು ಖರೀದಿಗೆ ಸ್ವಯಂ ನಿರ್ಬಂಧ

ಹಾಸನ: ಬಕ್ರೀದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವ ಉದ್ದೇಶದಿಂದ ಹಾಸನ ಜಿಲ್ಲೆಯ ಮುಸ್ಲಿಂ ಸಮುದಾಯ ಮಹತ್ವದ ನಿರ್ಧಾರ ಕೈಗೊಂಡಿದೆ. ಜಿಲ್ಲೆಯ ಮುಸ್ಲಿಂ ಒಕ್ಕೂಟ ಈ ಬಾರಿಯ ಬಕ್ರೀದ್ ಪ್ರಯುಕ್ತ ಜಾನುವಾರುಗಳಾದ ದನ, ಹಸು ಹಾಗೂ ಎಮ್ಮೆಗಳನ್ನು ಖರೀದಿ ಮಾಡಬಾರದೆಂದು ಸ್ವಯಂ ನಿರ್ಬಂಧ ಹೇರಿಕೊಂಡಿದೆ.

ಈ ನಿರ್ಧಾರದ ಅನುಷ್ಠಾನಕ್ಕಾಗಿ ಮಂಗಳವಾರ ನಡೆದ ಸಾಪ್ತಾಹಿಕ ಸಂತೆಯಲ್ಲಿ ಮುಸ್ಲಿಂ ಮುಖಂಡರು ಸಕ್ರಿಯವಾಗಿ ಪಾಲ್ಗೊಂಡು, ಸಮುದಾಯದ ಬಾಂಧವರು ಯಾವುದೇ ರೀತಿಯ ಜಾನುವಾರುಗಳನ್ನು ಖರೀದಿ ಮಾಡದಂತೆ ಮನವಿ ಮಾಡಿದರು.

ಈ ಕುರಿತು ಪ್ರತಿಕ್ರಿಯಿಸಿದ ಮುಸ್ಲಿಂ ಒಕ್ಕೂಟದ ಪ್ರಮುಖರು, “ಹಬ್ಬದ ಆಚರಣೆಗೆ ಯಾವುದೇ ರೀತಿಯ ಧಕ್ಕೆ ಅಥವಾ ವಿವಾದಗಳು ಉಂಟಾಗಬಾರದು ಎಂಬ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ನಾವು ಈ ನಿರ್ಧಾರ ಕೈಗೊಂಡಿದ್ದೇವೆ,” ಎಂದು ತಿಳಿಸಿದರು.

ರಾಜ್ಯದಲ್ಲಿ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಉಲ್ಲೇಖಿಸಿದ ಮುಖಂಡರು, “ನಾವು ಕಾನೂನಿನ ಚೌಕಟ್ಟನ್ನು ಗೌರವಿಸುತ್ತೇವೆ. ಕಾನೂನು ಮೀರಿ ಯಾವುದೇ ಕೆಲಸವನ್ನು ಮಾಡುವುದಿಲ್ಲ,” ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ, ಪ್ರಸ್ತುತ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಮುಖ್ಯ ಒಕ್ಕೂಟದ ಪ್ರಮುಖ ಅಮೀರ್ ಜಾನ್ ಸೇರಿದಂತೆ ಸಮುದಾಯದ ಅನೇಕ ಮುಖಂಡರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

More like this
Related

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ...

ಭಾರತದಲ್ಲಿ ಭೀತಿ ಸೃಷ್ಟಿಸಲು ದಾವೂದ್ ಗ್ಯಾಂಗ್‌ನಿಂದ ಟಾರ್ಗೆಟ್ ಹತ್ಯೆಗಳ ಸಂಚು; ಗುಪ್ತಚರ ಸಂಸ್ಥೆಗಳ ಎಚ್ಚರಿಕೆ

ನವದೆಹಲಿ: ದಾವೂದ್ ಇಬ್ರಾಹಿಂ ಸಿಂಡಿಕೇಟ್ ಭಾರತದಲ್ಲಿ ಭೀತಿ ಮತ್ತು ಆತಂಕದ ವಾತಾವರಣ...

ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ; ಭದ್ರತೆ ಕಟ್ಟು ನಿಟ್ಟಿನದು

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಕರ್ನಾಟಕದ ಉಡುಪಿ...

ಅಹಮದಾಬಾದ್ ವಿಮಾನ ದುರಂತ: 72 ಗಂಟೆಗಳ ತುರ್ತು ಕಾರ್ಯಾಚರಣೆ, ವಾರಗಳ ಕಾಲ ನಡೆದ ಡಿಎನ್‌ಎ ಗುರುತಿನ ಪ್ರಕ್ರಿಯೆ

ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದ ಮೊದಲ ವರ್ಷದ ಹಿನ್ನೆಲೆಯಲ್ಲಿ, ಅಹಮದಾಬಾದ್...

Copying is disabled on Udupi Digital News.