Saturday, June 13, 2026

ಬಳ್ಳಾರಿ ಫೈರಿಂಗ್ ಪ್ರಕರಣ: ಎಸ್ಪಿ ಪವನ್ ನೆಜ್ಜೂರ್ ಅಮಾನತು


ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ನಿವಾಸದ ಬಳಿ ಬ್ಯಾನರ್ ಅಳವಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಹಾಗೂ ಫೈರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಾವನ್ನಪ್ಪಿರುವ ಹಿನ್ನೆಲೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಂಡಿದ್ದು, ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಿದೆ.

ಗುರುವಾರವಷ್ಟೇ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದ ಪವನ್ ನೆಜ್ಜೂರ್ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಂಡಿರುವುದು ಪೊಲೀಸ್ ಇಲಾಖೆಯಲ್ಲಿ ಅಚ್ಚರಿ ಮೂಡಿಸಿದೆ.

ಬ್ಯಾನರ್ ವಿವಾದವನ್ನು ಸರಿಯಾಗಿ ನಿಭಾಯಿಸುವಲ್ಲಿ ಎಸ್ಪಿ ವಿಫಲರಾಗಿದ್ದಾರೆ. ಈ ಘಟನೆ ನಡೆದ ಬಳಿಕ ಮೇಲಾಧಿಕಾರಿಗಳಿಗೆ ಸಮಯಕ್ಕೆ ಸರಿಯಾಗಿ ಹಾಗೂ ಸಂಪೂರ್ಣ ಮಾಹಿತಿ ನೀಡಿಲ್ಲ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಅಮಾನತು ಶಿಕ್ಷೆ ವಿಧಿಸಲಾಗಿದೆ.

More like this
Related

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ...

ಭಾರತದಲ್ಲಿ ಭೀತಿ ಸೃಷ್ಟಿಸಲು ದಾವೂದ್ ಗ್ಯಾಂಗ್‌ನಿಂದ ಟಾರ್ಗೆಟ್ ಹತ್ಯೆಗಳ ಸಂಚು; ಗುಪ್ತಚರ ಸಂಸ್ಥೆಗಳ ಎಚ್ಚರಿಕೆ

ನವದೆಹಲಿ: ದಾವೂದ್ ಇಬ್ರಾಹಿಂ ಸಿಂಡಿಕೇಟ್ ಭಾರತದಲ್ಲಿ ಭೀತಿ ಮತ್ತು ಆತಂಕದ ವಾತಾವರಣ...

ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ; ಭದ್ರತೆ ಕಟ್ಟು ನಿಟ್ಟಿನದು

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಕರ್ನಾಟಕದ ಉಡುಪಿ...

ಅಹಮದಾಬಾದ್ ವಿಮಾನ ದುರಂತ: 72 ಗಂಟೆಗಳ ತುರ್ತು ಕಾರ್ಯಾಚರಣೆ, ವಾರಗಳ ಕಾಲ ನಡೆದ ಡಿಎನ್‌ಎ ಗುರುತಿನ ಪ್ರಕ್ರಿಯೆ

ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದ ಮೊದಲ ವರ್ಷದ ಹಿನ್ನೆಲೆಯಲ್ಲಿ, ಅಹಮದಾಬಾದ್...

Copying is disabled on Udupi Digital News.