Tuesday, May 12, 2026

ಬೆಂಗಳೂರು | ಶೆಡ್‍ನಲ್ಲಿ ಅಗ್ನಿ ಅವಘಡ: ಇಬ್ಬರು ಮಕ್ಕಳು ಸಜೀವ ದಹನ

ಬೆಂಗಳೂರು : ಶೆಡ್‍ವೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸಜೀವ ದಹನವಾಗಿರುವ ಘಟನೆ ಕೊತ್ತನೂರು ಠಾಣಾ ವ್ಯಾಪ್ತಿಯ ನಾರಾಯಣಪುರದಲ್ಲಿ ಸೋಮವಾರ ವರದಿಯಾಗಿದೆ.

ಈ ಅವಘಡದಲ್ಲಿ ಅರ್ಜುನ್(5) ಹಾಗೂ ಆಶಾ(3) ಸಜೀವ ದಹನಗೊಂಡ ಮಕ್ಕಳು ಎಂದು ಗುರುತಿಸಲಾಗಿದೆ.

ಕೂಲಿ ಕೆಲಸಕ್ಕೆಂದು ನಗರಕ್ಕೆ ಬಂದಿದ್ದ ಕುಟುಂಬವೊಂದು ನಾರಾಯಣಪುರದಲ್ಲಿ ಶೆಡ್ ಹಾಕಿಕೊಂಡು ವಾಸವಿತ್ತು. ಸೋಮವಾರ ಕೆಲಸಕ್ಕಾಗಿ ಫೊಷಕರು ಮಕ್ಕಳನ್ನು ಅಜ್ಜಿಯ ಬಳಿ ಬಿಟ್ಟು ಹೋಗಿದ್ದರು. ಇನ್ನು, ಅಜ್ಜಿ ಮಕ್ಕಳನ್ನು ಶೆಡ್‍ನಲ್ಲಿ ಬಿಟ್ಟು ಸ್ವಲ್ಪ ದೂರ ಹೊರಗಡೆ ಹೋಗಿದ್ದರು. ಈ ವೇಳೆ ಅನಿರೀಕ್ಷಿತವಾಗಿ ಶೆಡ್‍ಗೆ ಬೆಂಕಿ ಹೊತ್ತಿಕೊಂಡಿದೆ. ಮಕ್ಕಳ ಕಿರುಚಾಟ ಕೇಳಿ ಸ್ಥಳೀಯರು ಓಡಿ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಆದರೆ, ದುರಾದೃಷ್ಟವಶಾತ್ ಅಷ್ಟರಲ್ಲಿ ಮಕ್ಕಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನಾ ಸ್ಥಳಕ್ಕೆ ಕೊತ್ತನೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ, ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ.

More like this
Related

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿ ಶಂಕುಸ್ಥಾಪನೆಗೆ ಮುನ್ನವೇ ಅಸಮಾಧಾನ ಸ್ಫೋಟ

ಮಾಜಿ ಶಾಸಕ ಕೆ. ಗೋಪಾಲ ಪೂಜಾರಿಗೆ ಆಹ್ವಾನ ಇಲ್ಲದ ವಿಚಾರಕ್ಕೆ ಕಾರ್ಯಕರ್ತರ...

ಕುಂದಾಪುರ ಬಿಜೆಪಿಯ ರಾಜಕೀಯ ದಿವಾಳಿತನದ ಪ್ರದರ್ಶನ – ಕೆ. ವಿಕಾಸ್ ಹೆಗ್ಡೆ

ಕುಂದಾಪುರ: ಸುಮಾರು 60 ವರ್ಷಗಳ ಕಾಲ ಈ ದೇಶವನ್ನು ಆಳಿದ್ದ, ಭಾರತದ...

ಟಿಡಿ ರಾಜೇಗೌಡರಿಗೆ ರಿಲೀಫ್ : ಶೃಂಗೇರಿ ವಿಧಾನಸಭಾ ಕ್ಷೇತ ಮತ ಮರು ಎಣಿಕೆ ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ!

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ...

ರಾಜಸ್ಥಾನ ಜಲ ಜೀವನ ಮಿಷನ್ ಹಗರಣ: ದೆಹಲಿ ವಿಮಾನ ನಿಲ್ದಾಣದಲ್ಲಿ ಸಂಜಯ್ ಬಡಾಯ ಬಂಧನ;

ಜೈಪುರ: ರಾಜಸ್ಥಾನದ ಬಹುಕೋಟಿ ರೂಪಾಯಿ ಮೌಲ್ಯದ ಜಲ ಜೀವನ ಮಿಷನ್ (JJM)...

Copying is disabled on Udupi Digital News.