Monday, June 15, 2026

ರಸ್ತೆ ಅಪಘಾತದಲ್ಲಿ ಮಾಜಿ ಶಾಸಕ ಸುರೇಶ್ ಗೌಡಗೆ ಗಂಭೀರ ಗಾಯ; ಕಾರು ಸಂಪೂರ್ಣ ನಜ್ಜು-ಗುಜ್ಜು

ಮಂಡ್ಯ: ನಾಗಮಂಗಲದ ಮಾಜಿ ಶಾಸಕ ಕೆ.ಸುರೇಶ್ ಗೌಡ ಅವರು ಪ್ರಯಾಣಿಸುತ್ತಿದ್ದ ಕಾರು ರಾತ್ರಿ ಅಪಘಾತಕ್ಕೆ ಒಳಗಾಗಿದೆ. ಅದೃಷ್ಟವಶಾತ್ ಸುರೇಶ್ ಗೌಡ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನಿಗೂ ತೀವ್ರ ಗಾಯಗಳಾಗಿವೆ. ಇಬ್ಬರನ್ನೂ ತಕ್ಷಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮಂಡ್ಯ ಜಿಲ್ಲೆಯ ಬಸರಾಳು ಗ್ರಾಮದ ಬಳಿ ರಾತ್ರಿ 12 ಗಂಟೆ ವೇಳೆಗೆ ಈ ಅಪಘಾತದ ಘಟನೆ ನಡೆದಿದೆ. ನಾಗಮಂಗಲದ ಮಾಜಿ ಶಾಸಕ ಸುರೇಶ್ ಗೌಡ ಅವರು ಮದ್ದೂರಿನ ಹೊಸಗಾವಿ ಗ್ರಾಮಕ್ಕೆ ಹೋಗಿ ವಾಪಸ್ ಬರುತ್ತಿದ್ದರು. ಈ ಸಮಯದಲ್ಲಿ ಅಪಘಾತ ಸಂಭವಿಸಿದೆ.

ನಾಗಮಂಗಲಕ್ಕೆ ತೆರಳುವ ದಾರಿಯಲ್ಲಿ ತಡರಾತ್ರಿ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಗೆ ಹೋಗಿ ದೊಡ್ಡ ಅಪಘಾತಕ್ಕೀಡಾಗಿದೆ. ಕಾರು ಪಲ್ಟಿಯಾಗಿ ಸಂಪೂರ್ಣ ಹಾನಿಯಾಗಿದ್ದು, ರಕ್ತದ ಮಡುವಿನಲ್ಲಿದ್ದ ಇಬ್ಬರನ್ನೂ ಸ್ಥಳೀಯರು ತಕ್ಷಣ ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರು.
ಸುರೇಶ್ ಗೌಡ ತಲೆ, ಮುಖ, ಕೈ-ಕಾಲುಗಳಲ್ಲಿ ಗಂಭೀರ ಗಾಯಗಳಾಗಿವೆ. ಚಾಲಕನ ಸ್ಥಿತಿಯೂ ಗಂಭೀರವಾಗಿದೆ. ಇಬ್ಬರನ್ನೂ ಮೊದಲು ಮಂಡ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಉನ್ನತ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಸುರೇಶ್ ಗೌಡ ಅವರು ನಾಗಮಂಗಲ ಕ್ಷೇತ್ರದಿಂದ ಹಲವು ಬಾರಿ ಶಾಸಕರಾಗಿದ್ದರು. ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿರುವ ಅವರು ಪ್ರದೇಶದಲ್ಲಿ ಜನಪ್ರಿಯ ನಾಯಕರಾಗಿದ್ದಾರೆ.

More like this
Related

ಶಿವಮೊಗ್ಗ:ಹೃದಯಾಘಾತದಿಂದ ಶಾಲಾ ಆವರಣದಲ್ಲಿ ಕುಸಿದು ಬಿದ್ದ 6 ವರ್ಷದ ಬಾಲಕ!

ಶಿವಮೊಗ್ಗ: ಹೃದಯಾಘಾತದಿಂದ 6 ವರ್ಷದ ಬಾಲಕ ಮೃತಪಟ್ಟ ಘಟನೆ ಸಾಗರ ತಾಲೂಕಿನ...

ಮಣಿಪಾಲ| ತಪ್ಪಿದ ದುರಂತ: ಶಾಲಾ ಬಸ್ ಚಾಲಕನಿಗೆ ಹೃದಯಾಘಾತ

ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದರೂ, ಅವರ...

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ

ಮಲ್ಪೆ: ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾತ್ಕಾಲಿಕ...

ಜೂನ್ 17: ಕುಂದಾಪುರ ತಾಲೂಕು ಕಾರ್ಯನಿರತ‌ ಪತ್ರಕರ್ತರ ಸಂಘದಿಂದ‌ ‘ವಿಶ್ವ ಪರಿಸರ ದಿನಾಚರಣೆ’

ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅರಣ್ಯ ಇಲಾಖೆ...

Copying is disabled on Udupi Digital News.