Wednesday, July 29, 2026

KMF ಹಾಲಿನ ಉತ್ಪನ್ನಗಳ ಬೆಲೆ ಏರಿಕೆ: ನಾಳೆಯಿಂದ ಪರಿಷ್ಕೃತ ದರ ಜಾರಿಗೆ!

ಬೆಂಗಳೂರು: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF) ಗ್ರಾಹಕರಿಗೆ ಮತ್ತೊಂದು ಶಾಕ್ ನೀಡಿದೆ. ತನ್ನ ಜನಪ್ರಿಯ ‘ನಂದಿನಿ’ ಬ್ರ್ಯಾಂಡ್ನ ಬೆಣ್ಣೆ ಮತ್ತು ತುಪ್ಪದ ದರವನ್ನು ದಿಢೀರ್ ಏರಿಕೆ ಮಾಡಿದ್ದು, ಪರಿಷ್ಕೃತ ದರಗಳು ನಾಳೆಯಿಂದಲೇ ಜಾರಿಗೆ ಬರಲಿವೆ.

ತುಪ್ಪದ ದರವನ್ನು ಪ್ರತಿ ಕೆಜಿಗೆ 15 ರೂಪಾಯಿ ಹೆಚ್ಚಳ ಮಾಡಲಾಗಿದೆ. ಹಾಗೆಯೇ ಬೆಣ್ಣೆಯ ಬೆಲೆಯನ್ನು ಪ್ರತಿ ಕೆಜಿಗೆ 22 ರೂ. ಏರಿಕೆ ಮಾಡಲಾಗಿದೆ. ಈ ನೂತನ ದರಗಳು ಜುಲೈ 24 ರಿಂದ (ಶುಕ್ರವಾರ) ಅಧಿಕೃತವಾಗಿ ಜಾರಿಗೆ ಬರಲಿವೆ. ರಾಜ್ಯಾದ್ಯಂತ ಇರುವ ಎಲ್ಲಾ ಕೆಎಂಎಫ್ ಮಳಿಗೆಗಳಲ್ಲಿ ಈ ಹೊಸ ದರಗಳು ಅನ್ವಯವಾಗಲಿವೆ ಎಂದು ತಿಳಿದುಬಂದಿದೆ.

ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯು ಕೇವಲ ಗೃಹ ಬಳಕೆದಾರರಿಗೆ ಮಾತ್ರವಲ್ಲದೆ, ಹೋಟೆಲ್ ಮತ್ತು ಬೇಕರಿ ಉದ್ಯಮದ ಮೇಲೂ ದೊಡ್ಡ ಪರಿಣಾಮ ಬೀರಲಿದೆ. ತುಪ್ಪ ಮತ್ತು ಬೆಣ್ಣೆಯನ್ನು ಹೆಚ್ಚಾಗಿ ಬಳಸುವ ಸಿಹಿ ತಿಂಡಿ ತಯಾರಕರು ಹಾಗೂ ಹೋಟೆಲ್ ಮಾಲೀಕರು ಈ ದರ ಏರಿಕೆಯಿಂದ ಕಂಗೆಟ್ಟಿದ್ದಾರೆ.

ಬೆಲೆ ಏರಿಕೆಗೆ ಕೆಎಂಎಫ್ ಸಮರ್ಥನೆ: ಹಾಲು ಒಕ್ಕೂಟಗಳ ನಿರ್ವಹಣಾ ವೆಚ್ಚ, ಪ್ಯಾಕೇಜಿಂಗ್ ಸಾಮಗ್ರಿಗಳ ಬೆಲೆ ಹಾಗೂ ಸಾಗಣೆ ವೆಚ್ಚ ಗಣನೀಯವಾಗಿ ಹೆಚ್ಚಿರುವುದರಿಂದ ದರ ಏರಿಕೆ ಅನಿವಾರ್ಯವಾಗಿದೆ ಎಂದು ಕೆಎಂಎಫ್ ಮೂಲಗಳು ತಿಳಿಸಿವೆ.

ಖಾಸಗಿ ಬ್ರ್ಯಾಂಡ್ಗಳ ದರಕ್ಕೆ ಹೋಲಿಸಿದರೆ ನಂದಿನಿ ಉತ್ಪನ್ನಗಳ ಬೆಲೆ ಇಂದಿಗೂ ಅತ್ಯಂತ ಸ್ಪರ್ಧಾತ್ಮಕವಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ವರಮಹಾಲಕ್ಷ್ಮಿ ಹಬ್ಬ ಸೇರಿದಂತೆ ಸಾಲು ಸಾಲು ಹಬ್ಬಗಳ ದಿನಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ ಈ ದರ ಏರಿಕೆ ಜಾರಿಗೆ ಬಂದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

More like this
Related

ಧ್ವೇಷ ಭಾಷಣ ಪ್ರಕರಣ: ಶಾಸಕ ಯಶ್‌ಪಾಲ್‌ ಸುವರ್ಣಗೆ ಪೊಲೀಸರಿಂದ ನೋಟಿಸ್

ಉಡುಪಿ: ದ್ವೇಷ ಭಾಷಣ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ಗೆ ರಾಷ್ಟ್ರಮಟ್ಟದ ‘ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್–2026’ ಗೌರವ

ನವದೆಹಲಿಯಲ್ಲಿ ಕೇಂದ್ರ ಶಿಕ್ಷಣ ರಾಜ್ಯ ಸಚಿವ ಡಾ. ಸುಕಾಂತ್ ಮಜುಂದಾರ್ ಅವರಿಂದ...

ಯಶ್ಪಾಲ್ ಸುವರ್ಣ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು

ಕುಂದಾಪುರ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ...

ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ: ಮಂಜುನಾಥ ಭಂಡಾರಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ...

Copying is disabled on Udupi Digital News.