Monday, May 4, 2026

ಶೃಂಗೇರಿ |ಅಂಚೆ ಮತ ಮರುಎಣಿಕೆ: ಬಿಜೆಪಿಯ ಡಿ.ಎನ್. ಜೀವರಾಜ್ ಗೆಲುವು

ಚಿಕ್ಕಮಗಳೂರು: ಅಂಚೆ ಮತಪತ್ರಗಳ ಮರುಎಣಿಕೆಯಲ್ಲಿ ಫಲಿತಾಂಶ ಏರುಪೇರಾಗಿ ಬಿಜೆಪಿಯ ಡಿ.ಎನ್. ಜೀವರಾಜ್ ಶೃಂಗೇರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಹೈಕೋರ್ಟ್ ಆದೇಶದ ಮೇರೆಗೆ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಕಾರ್ಯ ಮೇ 2ರಂದು ಮುಕ್ತಾಯಗೊಂಡಿತ್ತು. ಆದರೆ ಫಲಿತಾಂಶ ಘೋಷಣೆ ಆಗಿರಲಿಲ್ಲ.

ಫಲಿತಾಂಶ ಪ್ರಕಟಿಸುವಂತೆ ಜೀವರಾಜ್ ಪರ ವಕೀಲರು ನೋಟಿಸ್ ನೀಡಿದ್ದರು. ಮಧ್ಯರಾತ್ರಿ ಚುನಾವಣಾ ಆಯೋಗ ಅಧಿಕೃತ ಘೋಷಣೆ ಮಾಡಿದೆ.

ಹಾಲಿ ಶಾಸಕರಾದ ಟಿ.ಡಿ. ರಾಜೇಗೌಡ ಅವರ ವಿರುದ್ಧ 2023ರ ಪರಾಜಿತ ಅಭ್ಯರ್ಥಿಯಾಗಿದ್ದ ಡಿ.ಎನ್. ಜೀವರಾಜ್ 255 ಮತಗಳ ಅಂತರದಲ್ಲಿ ಗೆದ್ದಿದ್ದಾರೆ.

ಮರುಎಣಿಕೆ ರೋಚಕ ಹಣಾಹಣಿಗೆ ಕಾರಣವಾಗಿತ್ತು. ಕೊನೆಗೆ ಜೀವರಾಜ್ ಮುನ್ನಡೆ ಸಾಧಿಸಿದರು.

ಫಲಿತಾಂಶ ಪ್ರಶ್ನಿಸಿ ಜೀವರಾಜ್ ನ್ಯಾಯಾಲಯದ ಮೊರೆ ಹೋಗಿದ್ದು, ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅಂತಿಮವಾಗಿ ಮೂರು ವರ್ಷಗಳ ಬಳಿಕ ಅಂಚೆ ಮತಪತ್ರಗಳ ಮರುಎಣಿಕೆ ನಡೆದು, ಕಾಂಗ್ರೆಸ್ಸಿನ ಟಿ.ಡಿ. ರಾಜೇಗೌಡ ಅವರು ಶಾಸಕತ್ವ ಕಳೆದುಕೊಂಡಿದ್ದಾರೆ.

More like this
Related

ಪಂಚ ರಾಜ್ಯ ಚುನಾವಣಾ ಫಲಿತಾಂಶ | ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ರ‍್ಯಾಲಿ ನಿಷೇಧಿಸಿದ ಚುನಾವಣಾ ಆಯೋಗ

ಕೋಲ್ಕತ್ತಾ: ಪಂಚ ರಾಜ್ಯ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ....

ಕರ್ನಾಟಕ ಉಪ ಚುನಾವಣೆ: ಬಾಗಲಕೋಟೆಯಲ್ಲಿ ಕಾಂಗ್ರೆಸ್, ದಾವಣಗೆರೆಯಲ್ಲಿ ಬಿಜೆಪಿ ಮುನ್ನಡೆ

Kerala Election Results 2026: ಬಹುಮತದ ಗಡಿ ದಾಟಿದ ಯುಡಿಎಫ್ ಮೈತ್ರಿಕೂಟಕೇರಳ...

ಕಾರ್ಕಳ| ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆ: ಆರೋಪಿ ತಮ್ಮನ ಬಂಧನ

ಕಾರ್ಕಳ : ಆಸ್ತಿ ವಿಚಾರದಲ್ಲಿ ತಮ್ಮನೇ ತನ್ನ ಅಣ್ಣನ ಕೊಲೆ ಮಾಡಿರುವ...

ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ : ಬಿ.ವೈ.ವಿಜಯೇಂದ್ರ

ಬೆಂಗಳೂರು : ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ. ಪಕ್ಷದ...

Copying is disabled on Udupi Digital News.