Friday, April 24, 2026

ದರ್ಗಾಗೆ ಬಂದಿದ್ದಾಗ ಅವಘಡ: ಕಾವೇರಿ ನದಿಯಲ್ಲಿ ಮುಳುಗಿ 6 ಮಂದಿ ದುರ್ಮರಣ

ಯುಡಿ ನ್ಯೂಸ್ ಡಾಟ್ ಕಾಮ್


ಮೈಸೂರು:
 ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಕೆ.ಆರ್‌.ನಗರದ ಪ್ರಸಿದ್ಧ ಅರ್ಕೇಶ್ವರ ದೇವಸ್ಥಾನದ ಸಮೀಪದಲ್ಲಿ ಭಾನುವಾರ ನಡೆದಿದೆ.

ಮೃತಪಟ್ಟವರನ್ನು ಯಾಸೀನ್ (23), ಫಾತಿಮ್ (30), ನೇಹಾನ್ (19), ಆಲೀಂ (13), ಹುಮಾಯೂನ್ (7) ಸೇರಿ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ದರ್ಗಾಕ್ಕೆ ಭೇಟಿ ನೀಡಲು ಬಂದಿದ್ದ ಪ್ರವಾಸಿಗರು, ಅರ್ಕೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದರು. ಈ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ನದಿಯಲ್ಲಿ ಮುಳುಗಿದ್ದಾರೆ. ಮೃತರೆಲ್ಲರೂ ಒಂದೇ ಕುಟುಂಬದವರೆಂದು ತಿಳಿದುಬಂದಿದೆ.

ಕೆ.ಆರ್. ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳೀಯ ಈಜುಗಾರರ ನೆರವಿನೊಂದಿಗೆ ನದಿಯಿಂದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸಲಾಗಿದೆ. ಘಟನಾ ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

More like this
Related

ಪ್ರಕರಣದ ಮುಂದಿನ ಎಲ್ಲ ಪ್ರಕ್ರಿಯೆಯಗಳಿಗೆ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ...

4ನೇ ಮಹಿಳಾ ಟಿ20: ಸರಣಿ ಕಳೆದುಕೊಂಡ ಬಳಿಕ ಭಾರತಕ್ಕೆ ಬೌಲಿಂಗ್ ಸವಾಲು

ಜೋಹಾನ್ಸ್‌ಬರ್ಗ್: ಐದು ಪಂದ್ಯಗಳ ಟಿ20 ಸರಣಿಯನ್ನು ಈಗಾಗಲೇ ಕೈಚೆಲ್ಲಿರುವ ಭಾರತ ಮಹಿಳಾ...

ಉಪಚುನಾವಣೆ ಫಲಿತಾಂಶ ಮೇ 4: ಡಿಕೆ ಶಿವಕುಮಾರ್ ಭವಿಷ್ಯಕ್ಕೆ ತಿರುವು ಸಾಧ್ಯ

ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗಳ ಫಲಿತಾಂಶ ಮೇ...

ಬೆಂಗಾಲ್ ಚುನಾವಣೆ: ಕರ್ತವ್ಯ ನಿರ್ಲಕ್ಷ್ಯ ಆರೋಪಕ್ಕೆ ಪೊಲೀಸ್ ಅಧಿಕಾರಿ ಅಮಾನತು

ಕೊಲ್ಕತ್ತಾ: Election Commission of India (ಇಸಿಐ) ಪಶ್ಚಿಮ ಬಂಗಾಳದ ಉತ್ತರ...

Copying is disabled on Udupi Digital News.