Tuesday, April 21, 2026

ಬೀದರ್‌ನಲ್ಲಿ ಕುಸಿದು ಬಿದ್ದು ಯುವಕ ಸಾವು: ಬಿರು ಬಿಸಿಲಿಗೆ ಮೊದಲ ಬಲಿ?

ಯುಡಿ ನ್ಯೂಸ್ ಡಾಟ್ ಕಾಮ್

ಬೀದರ್ರಾಜ್ಯದ ಹಲವೆಡೆ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಬಿಸಿಲ ಝಳಕ್ಕೆ ಕುಸಿದು ಬಿದ್ದು ಯುವಕನೋರ್ವ ಸಾವನ್ನಪ್ಪಿರುವ ಘಟನೆಯೊಂದು ನಗರದ ಹೊರವಲಯದ ಡಿಗ್ಗಿ ಗ್ರಾಮಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿ-50 ರಸ್ತೆ ಬಳಿ ನಡೆದಿದೆ.

ಮೃತ ಯುವಕನನ್ನು ಉತ್ತರಪ್ರದೇಶ ಮೂಲದ ಮೊಹ್ಮದ್ ಸಮೀರ ಲಯಿಕ್ ಅಹ್ಮದ್ (20) ಎಂದು ಗುರುತಿಸಲಾಗಿದೆ. ಈತ ಕಮಲನಗರದಲ್ಲಿ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ತಾಪಮಾನದ ಏರಿಕೆಯಿಂದ ತಾಳಲಾರದೆ ಮಿರ್ಜಾಪುರ ಪಲ್ಲಾದ ನಿವಾಸಿ ಮಹ್ಮದ್ ಸಮೀರ ಮೆಕ್ಯಾನಿಕ್ ಅಂಗಡಿ ಬಳಿ ನೀರು ಕುಡಿದು, ತಲೆ ಸುತ್ತು ಬರುತ್ತಿದೆ ಎಂದು ಕೆಲ ಹೊತ್ತು ವಿಶ್ರಾಂತಿ ಪಡೆದಿದ್ದ. ನಂತರ ಡಿಗ್ಗಿ ಗ್ರಾಮದ ಕಡೆಗೆ ತೆರಳುತ್ತಿರುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಘಟನೆಯ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ತಾಪಮಾನ ಏರಿಕೆಯಾಗಿ ಹೀಟ್ ಸ್ಟ್ರೋಕ್ ನಿಂದಲೇ ಯುವಕ ಸಾವನ್ನಪ್ಪಿದ್ದಾನೆಂದು ಶಂಕಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ನಂತರ ನಿಖರ ಕಾರಣ ತಿಳಿಯಲಿದೆ.

ರಾಜ್ಯದಲ್ಲಿ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇಂತಹ ಘಟನೆಗಳು ಜನರಲ್ಲಿ ಆತಂಕ ಉಂಟುಮಾಡುತ್ತಿವೆ. ಈ ನಡುವೆ ಸಾರ್ವಜನಿಕರು ಬಿಸಿಲಿನ ವೇಳೆ ಹೆಚ್ಚು ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

More like this
Related

ಮುಂಬೈಗೆ ವಿಜಯದ ‘ತಿಲಕ’: ತವರಿನಲ್ಲೇ ರನ್ ಗಳಿಸಲು ತಿಣುಕಾಡಿದ ಗಿಲ್ ಪಡೆ!

ಯುಡಿ ನ್ಯೂಸ್ ಡಾಟ್ ಕಾಮ್ಅಹ್ಮದಾಬಾದ್:  ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಪಿಎಸ್‌ಎಲ್‌ನಿಂದ ಹಿಂದೆ ಸರಿದ ದಸುನ್ ಶನಕಾಗೆ ಒಂದು ವರ್ಷದ ನಿಷೇಧ

ಕರಾಚಿ: ಶ್ರೀಲಂಕಾದ ಆಲ್‌ರೌಂಡರ್ Dasun Shanaka ಅವರಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ...

ಉಡುಪಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಪೀಠಾರೋಹಣ

ಯುಡಿ ನ್ಯೂಸ್ ಡಾಟ್ ಕಾಮ್ ಉಡುಪಿ: ಉಡುಪಿ ಧರ್ಮಕ್ಷೇತ್ರದ ದ್ವಿತೀಯ...

ಕುಂದಾಪುರ: ವಾಲಿಬಾಲ್ & ಕಬ್ಬಡಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿ ಪೂಜೆ

ಯುಡಿ ನ್ಯೂಸ್ ಡಾಟ್ ಕಾಮ್ಕುಂದಾಪುರ: ಸ್ಥಳೀಯ ಕ್ರೀಡಾಳುಗಳ ಬಹು ಬೇಡಿಕೆಯ ವಾಲಿಬಾಲ್...

Copying is disabled on Udupi Digital News.